ಕಲಬುರಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA Exam Scam) ಪರೀಕ್ಷೆಯ ಪ್ರಮುಖ ಆರೋಪಿ ಆರ್.ಡಿ. ಪಾಟೀಲ್ ತಲೆಮರೆಸಿಕೊಂಡಿದ್ದು ಆತನ ಹುಡುಕಾಟಕ್ಕೆ ಪೊಲೀಸರು ತೀವ್ರ ಶೋಧ ನಡೆಸುತ್ತಿರುವುದರ ಮಧ್ಯೆ ಆತನಿಗೆ ರಕ್ಷಣೆ ನೀಡಿದ ಆರೋಪದಡಿ ಫ್ಲ್ಯಾಟ್ ಮಾಲೀಕ ಮತ್ತು ಮ್ಯಾನೇಜರ್ನನ್ನು ಪೊಲೀಸರು ಬಂಧಿಸಿದ್ದಾರೆ.
ಕಲಬುರಗಿಯ ವರದಾ ಲೇಔಟ್ನಲ್ಲಿರುವ ಮಹಾಲಕ್ಷ್ಮಿ ಅಪಾರ್ಟಮೆಂಟ್ನಲ್ಲಿದ್ದ ಆರ್ಡಿ ಪಾಟೀಲ್, ನವೆಂಬರ್ 6 ರಂದು ಪೊಲೀಸರು ದಾಳಿ ನಡೆಸಿದಾಗ ಪರಾರಿಯಾಗಿದ್ದ. ಅದರಂತೆ ಆರೋಪಿಗೆ ಫ್ಲ್ಯಾಟ್ ಬಾಡಿಗೆ ನೀಡಿದ ತಪ್ಪಿಗೆ ಫ್ಲ್ಯಾಟ್ ಮಾಲೀಕ ಮತ್ತು ಅಪಾರ್ಟ್ ಮೆಂಟ್ ವ್ಯವಸ್ಥಾಪಕರನ್ನು ಬಂಧಿಸಲಾಗಿದೆ.
ಆರ್ ಡಿ ಪಾಟೀಲ್ಗೆ ಫ್ಲ್ಯಾಟ್ ಬಾಡಿಗೆ ನೀಡಿದ ತಪ್ಪಿಗೆ ಶಹಾಪೂರದ ಶಂಕರ್ ಗೌಡಯಾಳವಾರ್ ಮತ್ತು ಅಪಾರ್ಟ್ ಮೆಂಟ್ ವ್ಯವಸ್ಥಾಪಕ ದಿಲೀಪ್ ಪವಾರ್ ಬಂಧಿತರಾಗಿದ್ದಾರೆ. ಆರ್ಡಿ ಪಾಟೀಲ್ನಿಂದ ವ್ಯವಸ್ಥಾಪಕ ದಿಲೀಪ್ 10 ಸಾವಿರ ರೂಪಾಯಿ ಅಡ್ವಾನ್ಸ್ ಪಡೆದು, ಆ ಹಣ ಫ್ಲ್ಯಾಟ್ ಮಾಲೀಕ ಶಂಕರ್ ಗೌಡಗೆ ಕೊಟ್ಟಿದ್ದರು ಎನ್ನಲಾಗಿದೆ.
Advertisement