ಧಾರವಾಡ: ಪಟಾಕಿ ತರಲು ಹೋಗಿದ್ದ ಯುವಕರು ರಸ್ತೆ ಅಪಘಾತಕ್ಕೆ ಬಲಿ

ದೀಪಾವಳಿ ಹಬ್ಬಕ್ಕೆಂದು ಪಟಾಕಿ ತೆಗೆದುಕೊಂಡು ಹೋಗುತ್ತಿದ್ದ ಇಬ್ಬರು ಯುವಕರು ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನವಲಗುಂದ ತಾಲೂಕಿನ ಶಿವಳ್ಳಿ ಬಳಿ ನಡೆದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಧಾರವಾಡ: ದೀಪಾವಳಿ ಹಬ್ಬಕ್ಕೆಂದು ಪಟಾಕಿ ತೆಗೆದುಕೊಂಡು ಹೋಗುತ್ತಿದ್ದ ಇಬ್ಬರು ಯುವಕರು ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನವಲಗುಂದ ತಾಲೂಕಿನ ಶಿವಳ್ಳಿ ಬಳಿ ನಡೆದಿದೆ. 

ಕ್ರೂಸರ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದು ಐವರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಸದ್ಯ ನವಲಗುಂದ ತಾಲೂಕು ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಮೂವರು ಯುವಕರು ಹಬ್ಬಕ್ಕೆಂದು ಪಟಾಕಿ ತೆಗೆದುಕೊಂಡು ಬೈಕ್‌ನಲ್ಲಿ ನವಲಗುಂದದಿಂದ ಧಾರವಾಡಕ್ಕೆ ಬರುತ್ತಿದ್ದರು. ಈ ವೇಳೆ ಬೈಕ್‌ ಹಾಗೂ ಕ್ರೂಸರ್ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com