ಬೆಂಗಳೂರು: 'ಡಿಕೆ ಸಹೋದರರನ್ನು ಕೊಲ್ಲಿ' ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದ ವ್ಯಕ್ತಿ; ಬಂಧನ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಅವರ ಸಹೋದರ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರನ್ನು ಕೊಲ್ಲುವಂತೆ ಜನರನ್ನು ಒತ್ತಾಯಿಸುವ ಸಾಮಾಜಿಕ ಮಾಧ್ಯಮ ಪೋಸ್ಟ್ ಹಾಕಿದ್ದಕ್ಕಾಗಿ ಪೊಲೀಸರು ಬುಧವಾರ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಅವರ ಸಹೋದರ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರನ್ನು ಕೊಲ್ಲುವಂತೆ ಜನರನ್ನು ಒತ್ತಾಯಿಸುವ ಸಾಮಾಜಿಕ ಮಾಧ್ಯಮ ಪೋಸ್ಟ್ ಹಾಕಿದ್ದಕ್ಕಾಗಿ ಪೊಲೀಸರು ಬುಧವಾರ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. 

ಬಂಧಿತ ವ್ಯಕ್ತಿಯನ್ನು ರಂಜಿತ್ ಆರ್‌ಎಂ ಎಂದು ಗುರುತಿಸಲಾಗಿದೆ. ಈ ಸಂಬಂಧ ಬೆಂಗಳೂರಿನ ಜಯನಗರ ಬ್ಲಾಕ್‌ನ ಯುವ ಕಾಂಗ್ರೆಸ್ ಅಧ್ಯಕ್ಷ ಶರತ್ ದೂರು ದಾಖಲಿಸಿದ್ದಾರೆ.

ಆರೋಪಿ, 'ಡಿಕೆ ಸಹೋದರರನ್ನು ಕೊಲ್ಲಿ' ಎಂಬ ಶೀರ್ಷಿಕೆಯೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದರು. ಡಿಕೆ ಶಿವಕುಮಾರ್ ಮತ್ತು ಅವರ ಸಹೋದರ ಸುರೇಶ್ ಅವರನ್ನು ಉಲ್ಲೇಖಿಸಲು 'ಡಿಕೆ ಸಹೋದರರು' ಎಂಬ ಪದವನ್ನು ಸಾಮಾನ್ಯವಾಗಿ ಬಳಸಲಾಗುತ್ತದೆ.

ಆರೋಪಿಯು ಬೆಂಗಳೂರು ನಗರ ಪೊಲೀಸರ ಬಳಿ ಸೈಬರ್ ಕ್ರೈಂ ಡಿಟೆಕ್ಟಿವ್ ಎಂದು ಹೇಳಿಕೊಂಡಿದ್ದಾನೆ.

ಆತ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷ ಮತ್ತು ಮುಸ್ಲಿಂ ಸಮುದಾಯದ ವಿರುದ್ಧ ಆಕ್ಷೇಪಾರ್ಹ ಮತ್ತು ಅವಹೇಳನಕಾರಿ ಪೋಸ್ಟ್‌ಗಳನ್ನು ಹಾಕಿದ್ದಾರೆ.

ಜಯನಗರ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com