ಉಡುಪಿ ಒಂದೇ ಕುಟುಂಬದ ನಾಲ್ವರ ಹತ್ಯೆ: ಕೊಲೆ ಆರೋಪಿಯನ್ನು ಹೊಗಳಿದ ಯುವಕನ ವಿರುದ್ಧ ಪ್ರಕರಣ ದಾಖಲು

ಉಡುಪಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಹೊಗಳಿ ಇನ್‌ಸ್ಟಾಗ್ರಾಂನಲ್ಲಿ ವಿಕೃತ ಕಾಮೆಂಟ್ ಹಾಕಿದ್ದ ಯುವಕನ ವಿರುದ್ಧ ಉಡುಪಿಯ ಸಿಇಎನ್ ಕ್ರೈಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಡುಪಿ ಕೊಲೆ ಪ್ರಕರಣ ಆರೋಪಿ ಪ್ರವೀಣ್ ಚೌಗಲೆ
ಉಡುಪಿ ಕೊಲೆ ಪ್ರಕರಣ ಆರೋಪಿ ಪ್ರವೀಣ್ ಚೌಗಲೆ

ಮಂಗಳೂರು: ಉಡುಪಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಹೊಗಳಿ ಇನ್‌ಸ್ಟಾಗ್ರಾಂನಲ್ಲಿ ವಿಕೃತ ಕಾಮೆಂಟ್ ಹಾಕಿದ್ದ ಯುವಕನ ವಿರುದ್ಧ ಉಡುಪಿಯ ಸಿಇಎನ್ ಕ್ರೈಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೋಸ್ಟ್‌ನಲ್ಲಿ ಕೊಲೆ ಆರೋಪಿ ಪ್ರವೀಣ್ ಚೌಗಲೆ 15 ನಿಮಿಷಗಳಲ್ಲಿ ಒಂದು ನಿರ್ದಿಷ್ಟ ಸಮುದಾಯಕ್ಕೆ ಸೇರಿದ ನಾಲ್ವರನ್ನು ಕೊಂದು ದಾಖಲೆ ನಿರ್ಮಿಸಿದ ವ್ಯಕ್ತಿ ಎಂದು ವಿವರಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತುಳು ಭಾಷೆಯಲ್ಲಿರುವ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಚೌಗಲೆ ಅವರ ತಲೆಯ ಮೇಲೆ ಕಿರೀಟವನ್ನು ಹೊಂದಿರುವ ಮಾರ್ಫ್ ಮಾಡಿದ ಚಿತ್ರವನ್ನು ಸಹ ಹಂಚಿಕೊಳ್ಳಲಾಗಿದೆ.

ತಕ್ಷಣ ಕಾರ್ಯಪ್ರವೃತ್ತರಾದ ಉಡುಪಿ ಸಿಇಎನ್ ಪೊಲೀಸರು, ಐಟಿ ಆಕ್ಟ್ ಸೆಕ್ಷನ್ 66 ಮತ್ತು ಐಪಿಸಿ ಸೆಕ್ಷನ್ 505 (2) ಅಡಿಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com