ತುಮಕೂರು: ಹೆಜ್ಜೇನು ದಾಳಿಗೆ ಓರ್ವ ಬಲಿ, 20ಕ್ಕೂ ಹೆಚ್ಚು ಮಂದಿಗೆ ಗಾಯ

ಹೆಜ್ಜೇನು ದಾಳಿಯಿಂದ ಒಬ್ಬರು ಮೃತಪಟ್ಟು, 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ಹೆಜ್ಜೇನು ದಾಳಿ (ಸಾಂದರ್ಭಿಕ ಚಿತ್ರ)
ಹೆಜ್ಜೇನು ದಾಳಿ (ಸಾಂದರ್ಭಿಕ ಚಿತ್ರ)
Updated on

ತುಮಕೂರು: ಹೆಜ್ಜೇನು ದಾಳಿಯಿಂದ ಒಬ್ಬರು ಮೃತಪಟ್ಟು, 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಲಕ್ಕೇನಹಳ್ಳಿ ಗೇಟ್ ಬಳಿ ಈ ಘಟನೆ ನಡೆದಿದ್ದು, ನಾಮಕರಣ ಕಾರ್ಯಕ್ರಮಕ್ಕೆ ಹಾಜರಾಗಿದ್ದ ಜನರ ಮೇಲೆ ಏಕಾಏಕಿ ಹೆಜ್ಜೇನು ದಾಳಿ (Honeybee Attack) ಮಾಡಿದ್ದರಿಂದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು 47 ವರ್ಷದ ವೀರಭದ್ರಯ್ಯ ಎಂದು ಗುರುತಿಸಲಾಗಿದೆ.

ಕಡಬ ಹೋಬಳಿ ಬೆಲವತ್ತ ಗ್ರಾಮದ ರಂಗನಾಥಸ್ವಾಮಿ ದೇವಾಲಯದ ಆವರಣದಲ್ಲಿ ನಾಮಕರಣ ನಡೆಯುತ್ತಿದ್ದಾಗ ದಿಢೀರನೆ ಹೆಜ್ಜೇನು ನೋಣಗಳು ದಾಳಿ ನಡೆಸಿವೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ವೀರಭದ್ರಯ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಗಾಯಾಳುಗಳಿಗೆ ಗುಬ್ಬಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗುಬ್ಬಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮರಣೋತ್ತರ ಪರೀಕ್ಷೆಯ ನಂತರ ಶವವನ್ನು ವಾರಸುದಾರರಿಗೆ ಹಿಂದಿರುಗಿಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com