ಮೂರು ವಿದ್ಯುತ್ ಯೋಜನೆಗಳ ಫಲಾನುಭವಿಗಳ 389 ಕೋಟಿ ರೂ. ಬಾಕಿ ಮನ್ನಾಗೆ ರಾಜ್ಯ ಸರ್ಕಾರ ನಿರ್ಧಾರ

3 ವಿದ್ಯುತ್ ಯೋಜನೆಗಳ ಫಲಾನುಭವಿಗಳ 389 ಕೋಟಿ ರೂ. ಬಾಕಿ ಮನ್ನಾ ಮಾಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ಮಂಗಳವಾರ ಹೇಳಿದ್ದಾರೆ.
ಇಂಧನ ಸಚಿವ ಕೆ ಜೆ ಜಾರ್ಜ್ (ಸಂಗ್ರಹ ಚಿತ್ರ)
ಇಂಧನ ಸಚಿವ ಕೆ ಜೆ ಜಾರ್ಜ್ (ಸಂಗ್ರಹ ಚಿತ್ರ)
Updated on

ಬೆಂಗಳೂರು: 3 ವಿದ್ಯುತ್ ಯೋಜನೆಗಳ ಫಲಾನುಭವಿಗಳ 389 ಕೋಟಿ ರೂ. ಬಾಕಿ ಮನ್ನಾ ಮಾಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ಮಂಗಳವಾರ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಕೆಜೆ ಜಾರ್ಜ್, ‘ಕುಟೀರ ಭಾಗ್ಯ’, ‘ಭಾಗ್ಯಜ್ಯೋತಿ’ ಮತ್ತು ‘ಅಮೃತ ಜ್ಯೋತಿ’ ಯೋಜನೆ ಫಲಾನುಭವಿಗಳಿಗೆ ಉಚಿತವಾಗಿ ಅಥವಾ ಹೆಚ್ಚಿನ ಸಬ್ಸಿಡಿ ದರದಲ್ಲಿ ವಿದ್ಯುತ್ ಪಡೆಯುತ್ತಿದ್ದ ಫಲಾನುಭವಿಗಳ 389 ಕೋಟಿ ರೂ.ಗಳ ಬಾಕಿ ಮನ್ನಾ ಮಾಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಎಂದರು. ಅಂತೆಯೇ ಇದು ಈಗಾಗಲೇ ಈ ಮೂರು ಯೋಜನೆಗಳನ್ನು ತನ್ನ ಮಹತ್ವಾಕಾಂಕ್ಷೆಯ 'ಗೃಹ ಜ್ಯೋತಿ' ಯೋಜನೆಯೊಂದಿಗೆ ವಿಲೀನಗೊಳಿಸಲಾಗಿದ್ದು, ವಸತಿ ವಿದ್ಯುತ್ ಸಂಪರ್ಕಗಳಿಗೆ 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡುತ್ತದೆ ಎಂದರು.

ಈ ಹಿಂದೆ ‘ಕುಟೀರ ಭಾಗ್ಯ’ ಮತ್ತು ‘ಭಾಗ್ಯ ಜ್ಯೋತಿ’ ಫಲಾನುಭವಿಗಳು 40 ಹಾಗೂ ‘ಅಮೃತ ಜ್ಯೋತಿ’ ಫಲಾನುಭವಿಗಳು 75 ಯೂನಿಟ್‌ ವಿದ್ಯುತ್ ಪಡೆಯುತ್ತಿದ್ದರು. 40 ಯೂನಿಟ್ ಪಡೆದವರಿಗೆ ಈಗ 50 ಯೂನಿಟ್ ಜೊತೆಗೆ 10 ಯೂನಿಟ್ ಮತ್ತು 75 ಯೂನಿಟ್ ಪಡೆಯುವವರಿಗೆ ಶೇ.10ರಷ್ಟು ಹೆಚ್ಚುವರಿಯಾಗಿ ನೀಡಲಾಗುವುದು ಎಂದು ಜಾರ್ಜ್ ಸುದ್ದಿಗಾರರಿಗೆ ತಿಳಿಸಿದರು.

'ಕುಟೀರ ಭಾಗ್ಯ', 'ಭಾಗ್ಯಜ್ಯೋತಿ' ಮತ್ತು 'ಅಮೃತ ಜ್ಯೋತಿ' ಯೋಜನೆಗಳ ಫಲಾನುಭವಿಗಳ 389 ಕೋಟಿ ರೂ.ಗಳ ಹಣ ಬಾಕಿ ಇತ್ತು, ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ್ದೇನೆ ಮತ್ತು ಅದನ್ನು ಮನ್ನಾ ಮಾಡಲು ನಿರ್ಧರಿಸಿದ್ದೇವೆ. ಸೋಲಾರ್ ಸಬ್‌ಸ್ಟೇಷನ್‌ಗಳಿಗೆ ಸರ್ಕಾರ ಟೆಂಡರ್ ಕರೆದಿದ್ದು, 750 ಮೆಗಾವ್ಯಾಟ್ ಉತ್ಪಾದಿಸುವ ಏಳು ಬಿಡ್‌ದಾರರನ್ನು ಶಾರ್ಟ್‌ಲಿಸ್ಟ್ ಮಾಡಲಾಗಿದೆ ಎಂದು ಜಾರ್ಜ್ ಸುದ್ದಿಗಾರರಿಗೆ ತಿಳಿಸಿದರು.

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ಪ್ರತಿ ಯೂನಿಟ್‌ಗೆ 3.17 ರೂ ದರವನ್ನು ನಿಗದಿಪಡಿಸಿದೆ. ತುಮಕೂರು ಜಿಲ್ಲೆಯ ಪಾವಗಡದ ಅನೇಕ ರೈತರು ಸೌರ ವಿದ್ಯುತ್ ಉತ್ಪಾದಿಸುವವರಿಗೆ 8,000 ಎಕರೆ ಭೂಮಿಯನ್ನು ನೀಡಲು ಮುಂದೆ ಬಂದಿದ್ದಾರೆ ಎಂದು ಸಚಿವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com