ಚಳಿಗಾಲದ ಅಧಿವೇಶನದಲ್ಲಿ ಎಪಿಎಂಸಿ ಕಾಯ್ದೆಯನ್ನು ರಾಜ್ಯ ಸರ್ಕಾರ ಹಿಂಪಡೆಯುವ ಸಾಧ್ಯತೆ

ಬೆಂಗಳೂರು: ಸದ್ಯ ಅಸ್ತಿತ್ವದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಕಾಯ್ದೆಯನ್ನು ಹಿಂಪಡೆಯಲು ರಾಜ್ಯ ಸರ್ಕಾರ ಪ್ರಯತ್ನ ನಡೆಸುತ್ತಿದ್ದು, ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಅದನ್ನು ಮಂಡಿಸುವ ಸಾಧ್ಯತೆ ಇದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಸದ್ಯ ಅಸ್ತಿತ್ವದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಕಾಯ್ದೆಯನ್ನು ಹಿಂಪಡೆಯಲು ರಾಜ್ಯ ಸರ್ಕಾರ ಪ್ರಯತ್ನ ನಡೆಸುತ್ತಿದ್ದು, ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಅದನ್ನು ಮಂಡಿಸುವ ಸಾಧ್ಯತೆ ಇದೆ. ರೈತರಿಂದ ಸರಕು ಖರೀದಿಸಲು ಖಾಸಗಿ ವ್ಯಕ್ತಿಗಳು ಎಪಿಎಂಸಿ ಯಾರ್ಡ್‌ಗಳ ಹೊರಗೆ ಮಾರುಕಟ್ಟೆಗಳನ್ನು ಸ್ಥಾಪಿಸಲು ಅನುವು ಮಾಡಿಕೊಡುವ ಎಪಿಎಂಸಿ ಕಾಯ್ದೆ ತಿದ್ದುಪಡಿಗಳನ್ನು ಕಾಂಗ್ರೆಸ್ ವಿರೋಧಿಸುತ್ತಿದೆ.

ಈ ವರ್ಷದ ಜುಲೈನಲ್ಲಿ, ರಾಜ್ಯ ಸರ್ಕಾರ ‘ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ (ನಿಯಂತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ) ಮಸೂದೆ, 2023 ಮಂಡಿಸುವ  ಮೂಲಕ ಕಾಯ್ದೆ ಹಿಂಪಡೆಯಲು ಪ್ರಯತ್ನಿಸಿತು. ಬಿಜೆಪಿ ಹಾಗೂ ಜೆಡಿಎಸ್ ಇದನ್ನು ವಿರೋಧಿಸಿದ್ದರಿಂದ ಮೇಲ್ಮನೆಯಲ್ಲಿ ಅನುಮತಿ ಪಡೆಯುವಲ್ಲಿ ವಿಫಲವಾಯಿತು. ನಂತರ ಎಪಿಎಂಸಿ ಸಚಿವ ಶಿವಾನಂದ ಪಾಟೀಲ ನೇತೃತ್ವದ ಆಯ್ಕೆ ಸಮಿತಿಗೆ ಶಿಫಾರಸು ಮಾಡಲಾಗಿತ್ತು.

ಆಯ್ಕೆ ಸಮಿತಿಯು ಕೋಲಾರ, ಶಿವಮೊಗ್ಗ ಸೇರಿದಂತೆ ಕೆಲವೆಡೆ ಸಭೆಗಳನ್ನು ಪೂರ್ಣಗೊಳಿಸಿದ್ದು, ಇನ್ನೂ ಕೆಲವು ಸಭೆಗಳನ್ನು ನಡೆಸುವ ನಿರೀಕ್ಷೆಯಿದೆ ಎಂದು ಇಲಾಖೆಯ ಅಧಿಕೃತ ಮೂಲಗಳು ತಿಳಿಸಿವೆ. "ಒಮ್ಮೆ ಅದು ಮುಗಿದ ನಂತರ, ಸಮಿತಿ ಕಾಯ್ದೆಯನ್ನು ಹಿಂಪಡೆಯಲು ಶಿಫಾರಸು ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಮುಂದಿನ ತಿಂಗಳು ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಸರ್ಕಾರ ಇದನ್ನು ವಿಧಾನಸಭೆಯ ಮುಂದೆ ಮಂಡಿಸುವ ಸಾಧ್ಯತೆ ಇದೆ. ಇದನ್ನು ಶೀಘ್ರದಲ್ಲೇ ಮಾಡಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹೊಸ ಪ್ರಸ್ತಾವಿತ ಮಸೂದೆಯು ಕೃಷಿ ವ್ಯಾಪಾರದ ಮೇಲಿನ ನಿರ್ಬಂಧಗಳನ್ನು ಮರಳಿ ತರಲು ಮತ್ತು ಎಪಿಎಂಸಿಗಳಲ್ಲಿ ಮಾರಾಟಕ್ಕೆ ಅವಕಾಶ ನೀಡುವ ಗುರಿಯನ್ನು ಹೊಂದಿದೆ. ರಾಜ್ಯಾದ್ಯಂತ 162 ಎಪಿಎಂಸಿಗಳಿಗೆ ಸೆಸ್ ಮೂಲಕ ಆದಾಯ ಗಳಿಸಲು ಸಹಾಯ ಮಾಡಲು, ಕಾರ್ಮಿಕರಿಗೆ ವರ್ಷಪೂರ್ತಿ ಉದ್ಯೋಗ, ಕಾರ್ಟ್ ಮ್ಯಾನ್ ಮತ್ತು ಎಪಿಎಂಸಿಗಳಿಗೆ ಹೆಚ್ಚಿನ ಆದಾಯವನ್ನು ಒತ್ತಿಹೇಳಿದೆ. ಇದು ಕರ್ನಾಟಕದಲ್ಲಿ ಹೊಸ ಕಾಯ್ದೆಯನ್ನು ಅಂಗೀಕರಿಸಿದ ನಂತರ ಕಡಿಮೆಯಾಗಿದೆ.

ಮೇ 2020 ರಲ್ಲಿ, ಬಿಎಸ್ ಯಡಿಯೂರಪ್ಪನವರ ಮುಖ್ಯಮಂತ್ರಿಯಾಗಿದ್ದಾಗ, ಬಿಜೆಪಿ ಸರ್ಕಾರ ಎಪಿಎಂಸಿ ಮಸೂದೆಗೆ ಸುಗ್ರೀವಾಜ್ಞೆಯನ್ನು ಅಂಗೀಕರಿಸಿತ್ತು, ಇದನ್ನು ಡಿಸೆಂಬರ್ 2020 ರಲ್ಲಿ ಅಂಗೀಕರಿಸಲಾಗಿತ್ತು. 2021 ಜನವರಿಯಲ್ಲಿ ಕಾಯ್ದೆ ಅಧಿಸೂಚನೆಗೊಂಡಿತ್ತು. ನಂತರ ಕೇಂದ್ರ ಸರ್ಕಾರ ಕೃಷಿ ಕಾನೂನನ್ನು ರದ್ದುಪಡಿಸಿದರೂ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮಾಡಿರಲಿಲ್ಲ. ಈ ಕಾಯ್ದೆಯನ್ನು ಹಿಂಪಡೆಯುವಂತೆ ಹಲವು ವರ್ತಕರು ಹಾಗೂ ವಿರೋಧ ಪಕ್ಷದ ಮುಖಂಡರು ಬಸವರಾಜ ಬೊಮ್ಮಾಯಿ ಆಡಳಿತದ ಮೇಲೆ ಒತ್ತಡ ಹೇರಿದ್ದರೂ ಬೇಡಿಕೆ ಹಾಗೆಯೇ ಇತ್ತು. ಕಾಂಗ್ರೆಸ್ ಇದನ್ನು ವಿರೋಧಿಸುತ್ತಾ ಬಂದಿತ್ತು ಮತ್ತು ಅದನ್ನು ಹಿಂಪಡೆಯುವುದಾಗಿ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com