ಕರ್ತವ್ಯಲೋಪ: ಸರ್ಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಅಮಾನತು

ಕರ್ತವ್ಯಲೋಪ ಎಸಗಿದ ಹಿನ್ನೆಲೆಯಲ್ಲಿ ಕಲಬುರಗಿಯ ಸರ್ಕಾರಿ ಪ್ರೌಢಶಾಲೆಯ ಪ್ರಭಾರಿ ಮುಖ್ಯೋಪಾಧ್ಯಾಯರನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಡಿಡಿಪಿಐ) ಅಮಾನತುಗೊಳಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಕಲಬುರಗಿ: ಕರ್ತವ್ಯಲೋಪ ಎಸಗಿದ ಹಿನ್ನೆಲೆಯಲ್ಲಿ ಕಲಬುರಗಿಯ ಸರ್ಕಾರಿ ಪ್ರೌಢಶಾಲೆಯ ಪ್ರಭಾರಿ ಮುಖ್ಯೋಪಾಧ್ಯಾಯರನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಡಿಡಿಪಿಐ) ಅಮಾನತುಗೊಳಿಸಿದ್ದಾರೆ.

ಮೇಲಧಿಕಾರಿಗಳ ಗಮನಕ್ಕೆ ತಾರದೆ ಶಾದಿಪುರ ಸರಕಾರಿ ಪ್ರೌಢಶಾಲೆಯ ಪ್ರಭಾರಿ ಮುಖ್ಯೋಪಾಧ್ಯಾಯ ಸಾಬಣ್ಣ ರಜೆ ಮೇಲೆ ತೆರಳಿದ್ದರು. ಅಲ್ಲದೆ, ಮಧ್ಯಾಹ್ನದ ಊಟವನ್ನು ಸರಿಯಾಗಿ ವಿತರಿಸದ ಮತ್ತು ಹಣಕಾಸಿನ ವ್ಯವಹಾರ ನಿರ್ವಹಣೆ ಮಾಡದ ಆರೋಪಗಳೂ ಕೂಡ ಇವರ ಮೇಲೆ ಕೇಳಿಬಂದಿತ್ತು.

ಈ ಸಂಬಂಧ ಇಲಾಖಾ ವಿಚಾರಣೆ ಬಾಕಿಯಿದ್ದು, ಈ ನಡುವಲ್ಲೇ ಸಾಬಣ್ಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಅಮಾನತು ಆದೇಶದಲ್ಲಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com