ಸಾಂದರ್ಭಿಕ ಚಿತ್ರ
ರಾಜ್ಯ
ತುಮಕೂರು: ಡೆತ್ ನೋಟ್ ಬರೆದಿಟ್ಟು ಒಂದೇ ಕುಟುಂಬದ ಐವರು ಆತ್ಮಹತ್ಯೆ
ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ತುಮಕೂರಿನ ಸದಾಶಿವನಗರದ ಮನೆಯೊಂದರಲ್ಲಿ ನಡೆದಿದೆ.
ತುಮಕೂರು: ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ತುಮಕೂರಿನ ಸದಾಶಿವನಗರದ ಮನೆಯೊಂದರಲ್ಲಿ ನಡೆದಿದೆ.
ಮೃತರು ಗರೀಬ್ ಸಾಬ್, ಸುಮಯ್ಯ, ಹಜೀನಾ, ಮೊಹ್ಮದ್ ಶಬೀರ್, ಮೊಹಮದ್ ಮುನೀರ್ ಎಂದು ತಿಳಿದುಬಂದಿದೆ.
ಎರಡು ಪುಟಗಳ ಡೆತ್ನೋಟ್ ಸಿಕ್ಕಿದ್ದು ಸಾಲಬಾಧೆ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿರುವುದಾಗಿ ಬರೆದಿದ್ದಾರೆ. ಇನ್ನು ಆತ್ಮಹತ್ಯೆಗೂ ಮೊದಲು ವಿಡಿಯೋ ಸಹ ಮಾಡಿದ್ದಾರೆ.
ಸದ್ಯ ಸ್ಥಳಕ್ಕೆ ಎಸ್ಪಿ ಅಶೋಕ್ ವೆಂಕಟ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ತಿಲಕ್ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ