ಮಂಗಳೂರು: ಕಡಲತಡಿ ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಪ್ರಕರಣ ವರದಿಯಾಗಿದೆ. ಇಬ್ಬರು ಅಪರಿಚಿತ ಹಿಂದುತ್ವವಾದಿಗಳು ಅನ್ಯ ಧರ್ಮಕ್ಕೆ ಸೇರಿದ ಯುವಕ, ಯುವತಿಗೆ ಕಿರುಕುಳ ನೀಡಿದ್ದಾರೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಸಂಜೆ ಈ ಘಟನೆ ನಡೆದಿದೆ.
ಭಜರಂಗ ದಳಕ್ಕೆ ಸೇರಿದ ಆರೋಪಿಗಳು ಸೆಲ್ಫೋನ್ ರಿಪೇರಿ ಮಾಡಿಸಿಕೊಳ್ಳಲು ಅಂಗಡಿಯೊಂದಕ್ಕೆ ಹೋಗಿದ್ದ ವೇಳೆ ಯುವಕ, ಯುವತಿಗೆ ಕಿರುಕುಳ ನೀಡಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ತಿಳಿಸಿದ್ದಾರೆ.
ಕಿರುಕುಳಕ್ಕೆ ಒಳಗಾದವರು ಸಹೋದ್ಯೋಗಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ವಿಷಯ ತಿಳಿದ ತಕ್ಷಣ ಹೊಯ್ಸಳ ತಂಡ ಸ್ಥಳಕ್ಕೆ ಧಾವಿಸಿದೆ. ಆರೋಪಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.
Advertisement