ಮೈಸೂರು: ಪುತ್ರನ ಮೊಬೈಲ್ ಚಟಕ್ಕೆ ಬೇಸತ್ತು ಚಾಕುವಿನಿಂದ ಇರಿದು ಕೊಂದ ತಂದೆ!

ಮೈಸೂರು ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ಮೊಬೈಲ್ ಚಟದಿಂದ ಬೇಸತ್ತು ಸ್ವಂತ ಮಗನನ್ನೇ ಕೊಂದಿರುವ ಘಟನೆ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಮೈಸೂರು ನಗರದ ಬನ್ನಿಮಂಟಪದಲ್ಲಿ ಈ ಘಟನೆ ನಡೆದಿದೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ಮೊಬೈಲ್ ಚಟದಿಂದ ಬೇಸತ್ತು ಸ್ವಂತ ಮಗನನ್ನೇ ಕೊಂದಿರುವ ಘಟನೆ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಮೈಸೂರು ನಗರದ ಬನ್ನಿಮಂಟಪದಲ್ಲಿ ಈ ಘಟನೆ ನಡೆದಿದೆ.

ಮೃತನನ್ನು ಉಮೈಜ್ ಎಂದು ಗುರುತಿಸಲಾಗಿದ್ದು, ಕೃತ್ಯಕ್ಕೆ ಸಂಬಂಧಿಸಿದಂತೆ ಆತನ ತಂದೆ ಅಸ್ಲಂ ಪಾಷಾನನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಪ್ರಕಾರ, ಸಂತ್ರಸ್ತ ಮೊಬೈಲ್ ಫೋನಿನ ಚಟ ಹೊಂದಿದ್ದು, ತಂದೆ ಇದನ್ನು ವಿರೋಧಿಸಿದಾಗ ಇಬ್ಬರ ನಡುವೆ ಆಗಾಗ್ಗೆ ಜಗಳವಾಗುತ್ತಿತ್ತು.

ಇದೇ ವಿಚಾರವಾಗಿ ಬುಧವಾರ ತಂದೆ ಮತ್ತು ಮಗನ ನಡುವೆ ತೀವ್ರ ವಾಗ್ವಾದ ನಡೆದಿದೆ. ಈ ವೇಳೆ ಆರೋಪಿ ಚಾಕುವಿನಿಂದ ಮಗನಿಗೆ ಇರಿದಿದ್ದಾರೆ.

ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com