ತಂದೆ ಬದುಕಿದ್ದರೂ ದತ್ತಿ ಇಲಾಖೆ ದೇಗುಲಗಳಲ್ಲಿ ಅರ್ಚರಾಗಲು ಪುರೋಹಿತರ ಮಕ್ಕಳಿಗೆ ಅವಕಾಶ!

ಪುರೋಹಿತರ (ಅರ್ಚಕರ) ಮಕ್ಕಳಿಗೂ ದತ್ತಿ ಇಲಾಖೆಗೆ ಸೇರಿದ ದೇವಸ್ಥಾನಗಳಲ್ಲಿ ಅರ್ಚಕರಾಗಿ ಕೆಲಸ ಮಾಡುವ ಅವಕಾಶವನ್ನು ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರ ಕಲ್ಪಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಪುರೋಹಿತರ (ಅರ್ಚಕರ) ಮಕ್ಕಳಿಗೂ ದತ್ತಿ ಇಲಾಖೆಗೆ ಸೇರಿದ ದೇವಸ್ಥಾನಗಳಲ್ಲಿ ಅರ್ಚಕರಾಗಿ ಕೆಲಸ ಮಾಡುವ ಅವಕಾಶವನ್ನು ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರ ಕಲ್ಪಿಸಿದೆ.

ತಂದೆಯ ಜೀವಂತವಾಗಿರುವವರೆಗೂ ಅವರ ಮಕ್ಕಳು ದೇವಸ್ಥಾನಗಳಲ್ಲಿ ಅರ್ಚಕರಾಗಿ ಸೇವೆ ಸಲ್ಲಿಸಲು ಈ ಹಿಂದೆ ಅವಕಾಶ ಇರಲಿಲ್ಲ. ಇದೀಗ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಪುರೋಹಿತರ ಮಕ್ಕಳು, ದೇವಸ್ಥಾನದಲ್ಲಿ ಅರ್ಚಕರಾಗಿ ಸೇವೆ ಸಲ್ಲಿಸಲು ರಾಜ್ಯ ಸರ್ಕಾರ ಅವಕಾಶ ನೀಡಿದೆ.

ರಾಜ್ಯದಲ್ಲಿ ದತ್ತಿ ಇಲಾಖೆಯ 34,000 ದೇವಾಲಯಗಳಿವೆ. ಕರ್ನಾಟಕ ಹಿಂದೂ ಧಾರ್ಮಿಕ ಮತ್ತು ದತ್ತಿ ಕಾಯಿದೆ 1997, ಸೆಕ್ಷನ್ 9(1) ಪ್ರಕಾರ, ಸಿ ದರ್ಜೆಯ ದೇವಾಲಯಗಳಲ್ಲಿ ಕೆಲಸ ಮಾಡುವ ಪುರೋಹಿತರ ಪುತ್ರರು ಈವರೆಗೂ ತಂದೆಯ ನಿಧನದ ನಂತರವಷ್ಟೇ ಅರ್ಚಕರಾಗಿ ನೇಮಕಗೊಳ್ಳುತ್ತಿದ್ದರು. ಅನಾರೋಗ್ಯ ನಿಮಿತ್ತ ಅರ್ಚಕರು ದೇವಾಲಯಗಳಲ್ಲಿ ಸೇವೆ ಸಲ್ಲಿಕೆಗೆ ಹಾಜರಾಗದಿದ್ದರೂ ಮಕ್ಕಳಿಗೆ ಅವಕಾಶ ನೀಡಲಾಗುತ್ತಿರಲಿಲ್ಲ.

ಆದರೆ, ಇದೀಗ ಸರ್ಕಾರ ಆದೇಶ ಹೊರಡಿಸಿದ್ದು, ಪುರೋಹಿತರು ಮೃತಪಟ್ಟರೆ, ಅನಾರೋಗ್ಯ ಮತ್ತು ವಯೋಸಹಜ ಸಮಸ್ಯೆಗಳಿಂದಾಗಿ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಲು ಸಾಧ್ಯವಾಗದೇ ಇದ್ದಲ್ಲಿ ವಂಶಪಾರಂಪರ್ಯ ಹಕ್ಕುಗಳನ್ನು ಮಕ್ಕಳಿಗೆ ನೀಡಲಾಗುವುದು ಎಂದು ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com