ಗದಗ: ರೈಲಿನಡಿ ಸಿಲುಕಿ ಮೊಸಳೆ ಸಾವಿಗೀಡಾಗಿರುವ ಘಟನೆ ಗದಗ ಜಿಲ್ಲೆಯಲ್ಲಿ ಸೋಮವಾರ ವರದಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಳೇ ಆಲೂರು ಗ್ರಾಮದಲ್ಲಿ ಘಟನೆ ನಡೆದಿದೆ.
ಅಧಿಕಾರಿಗಳ ಪ್ರಕಾರ, ಮೊಸಳೆ ಮಲಪ್ರಭಾ ನದಿಯಿಂದ ಹೊರಬಂದು ಹಳಿ ದಾಟುವಾಗ ರೈಲಿಗೆ ಸಿಲುಕಿದೆ. ಎಂಟು ಅಡಿ ಉದ್ದದ ಮೊಸಳೆ ಎರಡು ತುಂಡುಗಳಾಗಿದೆ.
ಇದನ್ನು ಗಮನಿಸಿದ ಸ್ಥಳೀಯರು ಮೊಸಳೆಯ ಮೃತದೇಹವನ್ನು ಹಳಿಯಿಂದ ಹೊರತೆಗೆದು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಅರಣ್ಯ ಇಲಾಖೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಸತ್ತ ಮೊಸಳೆ ದೇಹವನ್ನು ವಿಲೇವಾರಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
Advertisement