ಬ್ರೇಕ್ ಫೇಲ್ಯೂರ್: ಮೈಸೂರು ರಸ್ತೆ ಮೇಲ್ಸೇತುವೆ ಮೇಲೆ ಡಿವೈಡರ್ ಗೆ ಬಿಎಂಟಿಸಿ ಬಸ್ ಢಿಕ್ಕಿ, ಯಾವುದೇ ಪ್ರಾಣಾಪಾಯವಿಲ್ಲ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಬಿಎಂಟಿಸಿ ಬಸ್ ಅಪಘಾತ ಸಂಭವಿಸಿದ್ದು, ಬ್ರೇಕ್ ಫೇಲ್ಯೂರ್ ನಿಂದ ಬಿಎಂಟಿಸಿ ಬಸ್ ಡಿವೈಡರ್ ಗೆ ಢಿಕ್ಕಿ ಹೊಡೆದಿದೆ.
ಬಿಎಂಟಿಸಿ ಅಪಘಾತ
ಬಿಎಂಟಿಸಿ ಅಪಘಾತ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಬಿಎಂಟಿಸಿ ಬಸ್ ಅಪಘಾತ ಸಂಭವಿಸಿದ್ದು, ಬ್ರೇಕ್ ಫೇಲ್ಯೂರ್ ನಿಂದ ಬಿಎಂಟಿಸಿ ಬಸ್ ಡಿವೈಡರ್ ಗೆ ಢಿಕ್ಕಿ ಹೊಡೆದಿದೆ.

ಬೆಂಗಳೂರಿನ ಮೈಸೂರು ರಸ್ತೆಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಮೇಲ್ಸೇತುವೆ ಮೇಲೆ ಇಂದು ಬೆಳಗ್ಗೆ ಈ ಅಪಘಾತ ಸಂಭವಿಸಿದ್ದು, ಮೇಲ್ಸೇತುವೆಯ ಚರ್ಚ್ ಸರ್ಕಲ್ ತಿರುವಿನಲ್ಲಿ ಬಸ್ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದಿದೆ. ಕೆ.ಆರ್.ಮಾರ್ಕೆಟ್ ನಿಂದ ‍ಚಾಮರಾಜಪೇಟೆಗೆ ತೆರಳುತ್ತಿದ್ದ ಬಿಎಂಟಿಸಿ ಬಸ್ ನ ಬ್ರೇಕ್ ಫೇಲ್ಯೂರ್ ಆಗಿ ರೋಡ್ ಡಿವೈಡರ್’ಗೆ ಡಿಕ್ಕಿ ಹೊಡೆದಿದೆ. ಘಟನೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಮಾರ್ಕೆಟ್ ಫ್ಲೈ ಓವರ್ ಮೇಲೆ ಬೆಳಗ್ಗೆ 7:10 ರ ಸುಮಾರಿಗೆ ಘಟನೆ ನಡೆದಿದ್ದು, ಬಸ್ ನಲ್ಲಿ ಯಾವೊಬ್ಬ ಪ್ರಯಾಣಿಕರು ಸಹ ಇರಲಿಲ್ಲ, ಈ ಹಿನ್ನೆಲೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬಸ್ ನಲ್ಲಿದ್ದ ಚಾಲಕ ಹಾಗೂ ನಿರ್ವಾಹಕ ಅದೃಷ್ಟವಶಾತ್ ಬಚಾವ್ ಆಗಿದ್ದಾರೆ. ಚಿಕ್ಕಪೇಟೆ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಬಿಎಂಟಿಸಿ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ, ಸದ್ಯ ಬಸ್ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಬಿಎಂಟಿಸಿ ಅಧಿಕಾರಿಗಳು ಮತ್ತು ಟ್ರಾಫಿಕ್ ಪೊಲೀಸರು ದೌಡಾಯಿಸಿದ್ದಾರೆ. ಅಪಘಾತದಿಂದಾಗಿ ಮೈಸೂರು ರಸ್ತೆ ಮೇಲ್ಸೇತುವೆ ಮೇಲೆ ಕೆಲಕಾಲ ಸಂಚಾರ ಅಸ್ಥವ್ಯಸ್ಥವಾಗಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com