ಬೆಂಕಿ ಹೊತ್ತಿ ಉರಿದ ಘಟನಾ ಸ್ಥಳ
ರಾಜ್ಯ
ಬೆಂಗಳೂರು: ಹೊತ್ತಿ ಉರಿದ ಪಟಾಕಿ ಅಂಗಡಿ, 3 ಸಾವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ
ಪಟಾಕಿ ಅನ್ ಲೋಡ್ ಮಾಡುತ್ತಿದ್ದ ವೇಳೆ ಪಟಾಕಿ ಅಂಗಡಿಗಳಿಗೆ ಬೆಂಕಿ ಹೊತ್ತಿಕೊಂಡು, ಮೂವರಿಗೆ ಗಾಯಗಳಾದ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ವರದಿಯಾಗಿದೆ.
ಬೆಂಗಳೂರು: ಪಟಾಕಿ ಅನ್ ಲೋಡ್ ಮಾಡುತ್ತಿದ್ದ ವೇಳೆ ಪಟಾಕಿ ಅಂಗಡಿಗಳಿಗೆ ಬೆಂಕಿ ಹೊತ್ತಿಕೊಂಡು, 3 ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ವರದಿಯಾಗಿದೆ.
ನವೀನ್ ಎಂಬುವವರಿಗೆ ಸೇರಿದ ಪಟಾಕಿ ಅಂಗಡಿಯಲ್ಲಿ ಈ ಅವಘಡ ಸಂಭವಿಸಿದೆ. ಲಾರಿಯಿಂದ ಪಟಾಕಿ ಅನ್ ಲೋಡ್ ಮಾಡುವಾಗ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಈ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆ ಅಕ್ಕಪಕ್ಕದ ಅಂಗಡಿಗಳಿಗೂ ವ್ಯಾಪಿಸಿದ್ದು, 4-5 ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಅಂಗಡಿಯ ಎದುರು ನಿಲ್ಲಿಸಿದ್ದ 3 ಬೈಕ್ ಗಳು ಸುಟ್ಟು ಕರಕಲಾಗಿವೆ. ಓರ್ವ ವ್ಯಕ್ತಿ ನಾಪತ್ತೆಯಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ