ಬೆಂಕಿ ಹೊತ್ತಿ ಉರಿದ ಘಟನಾ ಸ್ಥಳ
ಬೆಂಕಿ ಹೊತ್ತಿ ಉರಿದ ಘಟನಾ ಸ್ಥಳ

ಬೆಂಗಳೂರು: ಹೊತ್ತಿ ಉರಿದ ಪಟಾಕಿ ಅಂಗಡಿ, 3 ಸಾವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ

ಪಟಾಕಿ ಅನ್ ಲೋಡ್ ಮಾಡುತ್ತಿದ್ದ ವೇಳೆ ಪಟಾಕಿ ಅಂಗಡಿಗಳಿಗೆ ಬೆಂಕಿ ಹೊತ್ತಿಕೊಂಡು, ಮೂವರಿಗೆ ಗಾಯಗಳಾದ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ವರದಿಯಾಗಿದೆ.
Published on

ಬೆಂಗಳೂರು: ಪಟಾಕಿ ಅನ್ ಲೋಡ್ ಮಾಡುತ್ತಿದ್ದ ವೇಳೆ ಪಟಾಕಿ ಅಂಗಡಿಗಳಿಗೆ ಬೆಂಕಿ ಹೊತ್ತಿಕೊಂಡು, 3 ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ವರದಿಯಾಗಿದೆ.

ನವೀನ್ ಎಂಬುವವರಿಗೆ ಸೇರಿದ ಪಟಾಕಿ ಅಂಗಡಿಯಲ್ಲಿ ಈ ಅವಘಡ ಸಂಭವಿಸಿದೆ. ಲಾರಿಯಿಂದ ಪಟಾಕಿ ಅನ್ ಲೋಡ್ ಮಾಡುವಾಗ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಈ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆ ಅಕ್ಕಪಕ್ಕದ ಅಂಗಡಿಗಳಿಗೂ ವ್ಯಾಪಿಸಿದ್ದು, 4-5 ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಅಂಗಡಿಯ ಎದುರು ನಿಲ್ಲಿಸಿದ್ದ 3 ಬೈಕ್ ಗಳು ಸುಟ್ಟು ಕರಕಲಾಗಿವೆ. ಓರ್ವ ವ್ಯಕ್ತಿ ನಾಪತ್ತೆಯಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com