ಕೊಪ್ಪಳ: ಗಣೇಶ ವಿಸರ್ಜನೆ ವೇಳೆ ಡಿ.ಜೆ ಸೌಂಡ್; ಹೃದಯಾಘಾತದಿಂದ ಯುವಕ ಸಾವು

ಡಿಜೆ ಸಂಗೀತಕ್ಕೆ ಯುವಸಮೂಹ ಡ್ಯಾನ್ಸ್ ಮಾಡುತ್ತಿತ್ತು. ಈ ಸಂದರ್ಭದಲ್ಲಿ ಡ್ಯಾನ್ಸ್ ಮಾಡುತ್ತಲೇ ಯುವಕನೊಬ್ಬ ಹಠಾತ್ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದಿದೆ.
ಮೃತ ಯುವಕ ಸುದೀಪ್ ಸಜ್ಜನ್
ಮೃತ ಯುವಕ ಸುದೀಪ್ ಸಜ್ಜನ್
Updated on

ಕೊಪ್ಪಳ: ಡಿಜೆ ಸಂಗೀತಕ್ಕೆ ಯುವಸಮೂಹ ಡ್ಯಾನ್ಸ್ ಮಾಡುತ್ತಿತ್ತು. ಈ ಸಂದರ್ಭದಲ್ಲಿ ಡ್ಯಾನ್ಸ್ ಮಾಡುತ್ತಲೇ ಯುವಕನೊಬ್ಬ ಹಠಾತ್ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದಿದೆ.

ಸುದೀಪ್ ಸಜ್ಜನ್ (30) ಮೃತ ಯುವಕ. ಈತನಿಗೆ ಡಿಜೆ ಸೌಂಡ್ ಗೆ ಡ್ಯಾನ್ಸ್ ಮಾಡುತ್ತಿದ್ದ ವೇಳೆ ಹೃದಯಾಘಾತವಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ 21 ದಿನದ ಗಣೇಶ ವಿಸರ್ಜನೆ ನಡೆದಿದೆ. ಗಂಗಾವತಿಯ ಪ್ರಶಾಂತ ನಗರದ ಯುವಕರಿಂದ ಡಿಜೆ ಮೆರವಣಿಗೆ ಆಯೋಜನೆ ಮಾಡಲಾಗಿತ್ತು. ಅಂತೆಯೇ ಬೆಳ್ಳಂಬೆಳಗ್ಗೆ ಮೆರವಣಿಗೆ ಸಂದರ್ಭದಲ್ಲಿ ಡಿಜೆ ಸೌಂಡ್ ಹಾಕಿ ಡ್ಯಾನ್ಸ್ ಮಾಡಲಾಗುತ್ತಿತ್ತು.

ಮೆರವಣಿಗೆ ಸಾಗುತ್ತಿದ್ದ ವೇಳೆ ಸುದೀಪ್ ಡ್ಯಾನ್ಸ್ ಮಾಡುತ್ತಿದ್ದು, ಕೆಲ ಹೊತ್ತಿನ ಬಳಿಕ ಕುಸಿದು ಬಿದ್ದಿದ್ದಾನೆ. ಘಟನೆಯಿಂದ ಸ್ವಯಂ ಪ್ರೇರಿತವಾಗಿ ಯುವಕರು ಅರ್ಧಕ್ಕೆ ಡಿಜೆ ಬಂದ್ ಮಾಡಿದರು. ಯುವಕನ ಮೃತ ದೇಹ ಗಂಗಾವತಿ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಗಂಗಾವತಿಯ ಪ್ರಶಾಂತ ನಗರದ ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ನಿನ್ನೆ ಇದ್ದ ಹಿನ್ನೆಲೆಯಲ್ಲಿ ಮೆರವಣಿಗೆಗೆ ಮಹಾರಾಷ್ಟ್ರದಿಂದ ಡಿಜೆ ತರಿಸಲಾಗಿತ್ತು. ಡಿಜೆ ಸಂಗೀತಕ್ಕೆ ಯುವಸಮೂಹ ಡ್ಯಾನ್ಸ್ ಮಾಡುತ್ತಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com