ಇಸ್ರೇಲ್-ಹಮಾಸ್ ಮಧ್ಯೆ ಕದನ, ಸಹಸ್ರ ಸಂಖ್ಯೆಯಲ್ಲಿ ಸಾವು: ಇಸ್ರೇಲ್ ರಾಯಭಾರ ಕಚೇರಿ ಸಿಬ್ಬಂದಿ ಏನಂತಾರೆ?

ಇಸ್ರೇಲ್ ಮತ್ತು ಹಮಾಸ್ ನಡುವೆ ಯುದ್ಧ ತೀವ್ರವಾಗಿದೆ. 4,800 ಕಿ.ಮೀ ದೂರದಲ್ಲಿ ಯುದ್ಧ ನಡೆಯುತ್ತಿದ್ದು, ಬೆಂಗಳೂರಿನಲ್ಲಿರುವ ಇಸ್ರೇಲ್ ನ ರಾಯಭಾರ ಕಚೇರಿ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಆತ್ಮೀಯರ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. 
ಈಜಿಪ್ಟ್ ಮತ್ತು ಗಾಜಾ ಪಟ್ಟಿಯ ರಫಾ ನಡುವಿನ ಗಡಿಯಲ್ಲಿ ಇಸ್ರೇಲಿ ವಾಯುದಾಳಿಯಿಂದ ಉಂಟಾದ ಸ್ಫೋಟದಿಂದ ಹೊಗೆ ಹೊರಬರುತ್ತಿರುವುದು
ಈಜಿಪ್ಟ್ ಮತ್ತು ಗಾಜಾ ಪಟ್ಟಿಯ ರಫಾ ನಡುವಿನ ಗಡಿಯಲ್ಲಿ ಇಸ್ರೇಲಿ ವಾಯುದಾಳಿಯಿಂದ ಉಂಟಾದ ಸ್ಫೋಟದಿಂದ ಹೊಗೆ ಹೊರಬರುತ್ತಿರುವುದು

ಬೆಂಗಳೂರು: ಇಸ್ರೇಲ್ ಮತ್ತು ಹಮಾಸ್ ನಡುವೆ ಯುದ್ಧ ತೀವ್ರವಾಗಿದೆ. 4,800 ಕಿ.ಮೀ ದೂರದಲ್ಲಿ ಯುದ್ಧ ನಡೆಯುತ್ತಿದ್ದು, ಬೆಂಗಳೂರಿನಲ್ಲಿರುವ ಇಸ್ರೇಲ್ ನ ರಾಯಭಾರ ಕಚೇರಿ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಆತ್ಮೀಯರ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. 

ಕರ್ನಾಟಕದಲ್ಲಿ ಸುಮಾರು 100 ಇಸ್ರೇಲಿ ಕುಟುಂಬಗಳು ವಾಸಿಸುತ್ತಿದ್ದು, ಮುಖ್ಯವಾಗಿ ಮೈಸೂರು ಮತ್ತು ಬೆಂಗಳೂರಿನಲ್ಲಿದ್ದಾರೆ. ಬೆಂಗಳೂರಿನಲ್ಲಿರುವ ಇಸ್ರೇಲ್‌ನ ಕಾನ್ಸುಲ್ ಜನರಲ್ ಟಮ್ಮಿ ಬೆನ್-ಹೈಮ್ ಅವರು ತಮ್ಮ ನಿವೃತ್ತ ಪೋಷಕರು ಮತ್ತು ಮನೆಗೆ ಮರಳಿದ ಇತರ ಕುಟುಂಬ ಸದಸ್ಯರ ಸುರಕ್ಷತೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ರಾಕೆಟ್‌ಗಳು ಹಾರಿಹೋಗುವುದನ್ನು ಮತ್ತು ಕಟ್ಟಡಗಳಿಗೆ ಅಪ್ಪಳಿಸುತ್ತಿರುವುದು ಮತ್ತು ಅಲ್ಲಿ ಭಯೋತ್ಪಾದಕರ ಅಟ್ಟಹಾಸ ನೋಡಿ ಭಯ, ಆತಂಕವಾಗುತ್ತಿದೆ ಎಂದು ಅಳುತ್ತಾ ಹೇಳಿದರು. 

ಯುದ್ಧವು ಇಸ್ರೇಲ್‌ಗೆ ಹೊಸದಲ್ಲ. ನಾವು ದೇಶದ ಪ್ರತಿಯೊಂದು ಮನೆ ಅಥವಾ ಅಪಾರ್ಟ್‌ಮೆಂಟ್‌ನಲ್ಲಿ ಪ್ರತ್ಯೇಕ ಬಾಂಬ್ ಶೆಲ್ಟರ್ ನ್ನು ನಿರ್ಮಿಸಬೇಕಾಗಿದೆ. ಇದು ಕಡ್ಡಾಯವಾಗಿದೆ. ಕಟ್ಟಡದ ಮೇಲೆ ಬಾಂಬ್ ದಾಳಿ ನಡೆದರೂ ಜನರು ಸುರಕ್ಷಿತವಾಗಿರುವುದನ್ನು ಇದು ಖಚಿತಪಡಿಸುತ್ತದೆ. ಸೈರನ್ ಮೊಳಗಿದ ತಕ್ಷಣ, ಜನರು ಸುರಕ್ಷಿತ ಸ್ಥಳಕ್ಕೆ ಹೋಗುತ್ತಾರೆ. ಇಸ್ರೇಲ್‌ನಲ್ಲಿ ನೆಲೆಸಿರುವ ಎಲ್ಲಾ ಜನರು, ನನ್ನ ಪೋಷಕರೂ ಸಹ ಯುದ್ಧ ಪ್ರಾರಂಭವಾದಾಗಿನಿಂದ ಇದನ್ನು ಮಾಡುತ್ತಿದ್ದಾರೆ ಎಂದರು. 

ಹಮಾಸ್ ಉಗ್ರರು, ಆರು ತಿಂಗಳವರೆಗೆ ಮಹಿಳೆಯರು ಮತ್ತು ಮಕ್ಕಳನ್ನು ಒತ್ತೆಯಾಳಾಗಿ ಇರಿಸಿದೆ ಎನ್ನುತ್ತಾರೆ. ಜಗತ್ತು ತಿಳಿಯಬೇಕು. ಸರ್ಕಾರ ಮತ್ತು ರಾಯಭಾರ ಕಚೇರಿ ನಮ್ಮೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರ ಸಂದೇಶ ಸ್ಪಷ್ಟವಾಗಿತ್ತು. ಸಮಾಜದ ಎಲ್ಲಾ ವರ್ಗದ ಜನರು ನಮ್ಮ ಪರ ನಿಂತಿದ್ದಾರೆ ಎಂದರು. 

ತಮ್ಮ ಪೋಷಕರು ಮತ್ತು ಕುಟುಂಬದ ಸುರಕ್ಷತೆಯ ಬಗ್ಗೆ ಚಿಂತೆ ಮತ್ತು ಆತಂಕಗಳ ಹೊರತಾಗಿಯೂ, ಭಾರತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಇಸ್ರೇಲ್‌ನಲ್ಲಿ ಹೊಂದಿರುವವರಿಗೆ ಸಹಾಯ ಮಾಡುವುದು ರಾಯಭಾರ ಕಚೇರಿ ಸಿಬ್ಬಂದಿಯ ಕೆಲಸವಾಗಿದೆ. ಇಲ್ಲಿಯವರೆಗೆ ಯಾರೂ ಸಹಾಯಕ್ಕಾಗಿ ಕಾನ್ಸುಲೇಟ್ ನ್ನು ಸಂಪರ್ಕಿಸಿಲ್ಲ ಎಂದು ತಿಳಿಸಿದರು.

ಕರ್ನಾಟಕದಲ್ಲಿರುವ ತನ್ನ ದೇಶವಾಸಿಗಳ ಬಗ್ಗೆ, ಯಾವುದೇ ಹೆಚ್ಚುವರಿ ಅಥವಾ ವಿಶೇಷ ಭದ್ರತೆಯನ್ನು ನೀಡಲಾಗುತ್ತಿಲ್ಲ ಎನ್ನುತ್ತಾರೆ. ನಾವು ನಿರಂತರ ಎಚ್ಚರಿಕೆ ವಹಿಸಬೇಕಾಗುತ್ತದೆ ಎಂದರು. ನಮಗೆ ಹೋರಾಡಲು ಯಾವುದೇ ಪುರುಷರು ಅಗತ್ಯವಿಲ್ಲ. ಅದನ್ನು ನಾವೇ ಮಾಡಬಹುದು. ಭಯೋತ್ಪಾದನೆ ವಿರುದ್ಧದ ನಮ್ಮ ಹೋರಾಟದಲ್ಲಿ ಜಗತ್ತು ನಮ್ಮೊಂದಿಗೆ ಒಗ್ಗಟ್ಟಾಗಿ ನಿಲ್ಲಬೇಕೆಂದು ನಾವು ಬಯಸುತ್ತೇವೆ. ಭಯೋತ್ಪಾದನೆಯ ವಿರುದ್ಧ ನಿಮ್ಮ ಪ್ರತಿಕ್ರಿಯೆ ಮತ್ತು ನಿಲುವು ಸ್ಪಷ್ಟವಾಗಿಲ್ಲದಿದ್ದರೆ, ಅದು ಮನೆ ಬಾಗಿಲಿಗೆ ಬರಬಹುದು. ಭಯೋತ್ಪಾದನೆ ಎಂದರೆ ಏನು ಎಂದು ನಮಗೆ ತಿಳಿದಿದೆ ಎನ್ನುತ್ತಾರೆ ಟಮ್ಮಿ ಬೆನ್-ಹೈಮ್.

ಇದೇ ವೇಳೆ ಭದ್ರತಾ ಕಾರಣ ನೀಡಿ ಬೆಂಗಳೂರಿನ ಕಾನ್ಸುಲೇಟ್ ಕಚೇರಿಯ ನಾಮಫಲಕವನ್ನು ತೆಗೆಯಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com