ಕಠಿಣ ಎಚ್ಚರಿಕೆ ನಡುವೆಯೂ ನೈತಿಕ ಪೊಲೀಸ್‌ಗಿರಿ: ಹಿಂದೂ ಬಾಲಕಿಯೊಂದಿಗಿದ್ದ ಇಬ್ಬರು ಮುಸ್ಲಿಂ ಹುಡುಗರಿಗೆ ತರಾಟೆ

ಸಿದ್ದರಾಮಯ್ಯ ಸರ್ಕಾರದ ಕಟ್ಟುನಿಟ್ಟಿನ ಎಚ್ಚರಿಕೆ ಮತ್ತು ವಿಶೇಷ ವಿಭಾಗ ಸ್ಥಾಪನೆಯ ನಡುವೆಯೂ, ಕೋಮು ಸೂಕ್ಷ್ಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ ಪ್ರಕರಣ ವರದಿಯಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಮಂಗಳೂರು: ಸಿದ್ದರಾಮಯ್ಯ ಸರ್ಕಾರದ ಕಟ್ಟುನಿಟ್ಟಿನ ಎಚ್ಚರಿಕೆ ಮತ್ತು ವಿಶೇಷ ವಿಭಾಗ ಸ್ಥಾಪನೆಯ ನಡುವೆಯೂ, ಕೋಮು ಸೂಕ್ಷ್ಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ ಪ್ರಕರಣ ವರದಿಯಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಮಂಗಳೂರು ನಗರ ಸಮೀಪದ ಬಂಟ್ವಾಳ ತಾಲೂಕಿನ ಪೆರುವಾಯಿ ಬಳಿ ಗುರುವಾರ ಈ ಘಟನೆ ನಡೆದಿದೆ. ಬಸ್ ನಿಲ್ದಾಣದಲ್ಲಿ ಹಿಂದೂ ಬಾಲಕಿಯ ಜೊತೆಗೆ ನಿಂತಿದ್ದ ಇಬ್ಬರು ಮುಸ್ಲಿಂ ಹುಡುಗರನ್ನು ಸ್ಥಳೀಯ ಗುಂಪೊಂದು ಪ್ರಶ್ನಿಸಿದೆ.

ಈ ಮೂವರು ಬಸ್ ನಿಲ್ದಾಣದಲ್ಲಿ ನಿಂತಿರುವುದನ್ನು ಕಂಡು ಸ್ಥಳೀಯ ಗುಂಪೊಂದು ಅವರ ಚಲನವಲನದ ಬಗ್ಗೆ ಅನುಮಾನ ವ್ಯಕ್ತಪಡಿಸಿದೆ. ಕುದ್ದುಪದವು ಕಡೆಯಿಂದ ಬಸ್‌ನಲ್ಲಿ ಬಂದು ಕೇರಳದ ಕಾಸರಗೋಡಿನ ಉಪ್ಪಳಕ್ಕೆ ತೆರಳಲು ಅವರು ಕಾಯುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯರು ಅವರನ್ನು ಪ್ರಶ್ನಿಸಿ ವಿಡಿಯೋ ರೆಕಾರ್ಡ್ ಮಾಡಿದ್ದಾರೆ. ಹುಡುಗರು ತಾವು ವಿದ್ಯಾರ್ಥಿಗಳಾಗಿದ್ದು, ಪರಸ್ಪರ ಪರಿಚಯವಿದೆ ಎಂದು ಹೇಳಿದ್ದಾರೆ. ಆದರೂ, ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಬಳಿಕ ವಿಟ್ಲ ಪೊಲೀಸರು ಅವರನ್ನು ಠಾಣೆಗೆ ಕರೆದೊಯ್ದು ಪ್ರಾಥಮಿಕ ವಿಚಾರಣೆ ಬಳಿಕ ಬಿಡುಗಡೆ ಮಾಡಿದ್ದಾರೆ. ತಾವು ಕಾಸರಗೋಡು ಜಿಲ್ಲೆಯ ಪೆರ್ಲ ನಿವಾಸಿಗಳೆಂದು ಬಾಲಕರು ಪೊಲೀಸರಿಗೆ ತಿಳಿಸಿದ್ದಾರೆ.

ಈ ನಡುವೆ ಬಾಲಕರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com