ಎಂಸಿ ಸುಧಾಕರ್
ಎಂಸಿ ಸುಧಾಕರ್

ವಿದ್ಯಾರ್ಥಿಗಳು -ಪೋಷಕರು ದೂರು ನೋಂದಾಯಿಸಲು ಕೆ ಇಎಆನ್‌ಲೈನ್ ಪೋರ್ಟಲ್‌: ಎಂ ಸಿ ಸುಧಾಕರ್

ದೂರು ಪರಿಹಾರ ವ್ಯವಸ್ಥೆಯನ್ನು ಪಾರದರ್ಶಕವಾಗಿಸಲು, ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ತಮ್ಮ ದೂರುಗಳನ್ನು ನೋಂದಾಯಿಸಲು ಕೆ ಇಎಆನ್‌ಲೈನ್ ಪೋರ್ಟಲ್‌ನಲ್ಲಿ ಕಾರ್ಯನಿರ್ವಹಿಸುತ್ತದೆ.
Published on

ಬೆಂಗಳೂರು: ದೂರು ಪರಿಹಾರ ವ್ಯವಸ್ಥೆಯನ್ನು ಪಾರದರ್ಶಕವಾಗಿಸಲು, ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ತಮ್ಮ ದೂರುಗಳನ್ನು ನೋಂದಾಯಿಸಲು ಕೆ ಇಎಆನ್‌ಲೈನ್ ಪೋರ್ಟಲ್‌ನಲ್ಲಿ ಕಾರ್ಯನಿರ್ವಹಿಸುತ್ತದೆ.

ಈ ಪೋರ್ಟಲ್ ಮೂಲಕ ದೂರುಗಳನ್ನು ನೋಂದಾಯಿಸಿಕೊಳ್ಳಬಹುದು ಮತ್ತು ವಿದ್ಯಾರ್ಥಿಗಳು  ದೀರ್ಘ ಸರತಿ ಸಾಲಿನಲ್ಲಿ ಕಾಯಬೇಕಾಗಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದ್ದಾರೆ.

ಶುಕ್ರವಾರ ಕೆಇಎಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಎಸ್‌ ಅವರೊಂದಿಗೆ ವಿದ್ಯಾರ್ಥಿಗಳು ಮತ್ತು ಪೋಷಕರೊಂದಿಗೆ ಸಂವಾದ ನಡೆಸಿದರು.
 
ವಿವಿಧ ಸುತ್ತುಗಳ ಮಾಹಿತಿ, ನೋಂದಣಿ ಪ್ರಕ್ರಿಯೆ, ಶುಲ್ಕ ಪಾವತಿ ಮತ್ತು ವಿವಿಧ ಸಮಸ್ಯೆಗಳಿಗೆ ಯಾರನ್ನು ಸಂಪರ್ಕಿಸಬೇಕು,  ಎಂಬದು ಸೇರದಂತೆ ಸಂಪೂರ್ಣ ಪ್ರವೇಶ ಪ್ರಕ್ರಿಯೆಯನ್ನು ವಿವರಿಸಲು ಮಾರ್ಗದರ್ಶಿಯಾಗಿ ಕಾರ್ಯನಿರ್ವಹಿಸುವ ಅಪ್ಲಿಕೇಶನ್‌ನಲ್ಲಿ ಇಲಾಖೆ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ಹೇಳಿದರು.

ಮುಂದಿನ ಶೈಕ್ಷಣಿಕ ವರ್ಷ (2023-2024) ಪ್ರಾರಂಭವಾಗುವ ಮೊದಲು, ಎಲ್ಲಾ ಶ್ರೇಣಿಗಳ ಪ್ರಕ್ರಿಯೆಯನ್ನು ಸುಗಮಗೊಳಿಸಲು ಮತ್ತು ವಿಳಂಬವನ್ನು ತಪ್ಪಿಸಲು ಪ್ರಾಥಮಿಕ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರೊಂದಿಗೆ ಜಂಟಿ ಸಭೆ ನಡೆಸಲಾಗುವುದು ಎಂದು ಸಚಿವರು ಹೇಳಿದರು.

ಯುಜಿ ಮತ್ತು ಪಿಜಿ ಸೆಮಿಸ್ಟರ್ ಪರೀಕ್ಷೆಗಳಲ್ಲಿ ಏಕರೂಪತೆ ಇರಬೇಕು. ಇದು ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು.

ಶುಲ್ಕ ನಿಯಂತ್ರಣ ಸಮಿತಿಗೆ ನ್ಯಾಯಾಲಯದ ಆದೇಶಕ್ಕಾಗಿ ನಾವು ಕಾಯುತ್ತಿದ್ದೇವೆ ಎಂದು ಅವರು ಹೇಳಿದರು. ನಮ್ಮ ಕಡೆಯಿಂದ ನಾವು ನ್ಯಾಯಮೂರ್ತಿ ಶ್ರೀನಿವಾಸಗೌಡ ಅವರನ್ನು ಮುಖ್ಯಸ್ಥರನ್ನಾಗಿ ಶಿಫಾರಸು ಮಾಡಿದ್ದೇವೆ, ಆದೇಶವು ಅದನ್ನು ದೃಢಪಡಿಸಿದ ತಕ್ಷಣ, ಸಮಿತಿಯು ಸಕ್ರಿಯವಾಗಿರುತ್ತದೆ ಎಂದು ತಿಳಿಸಿದ್ದಾರೆ. ಏತನ್ಮಧ್ಯೆ 93,000 ಎಂಜಿನಿಯರಿಂಗ್ ಸೀಟುಗಳು ಭರ್ತಿಯಾಗಿದ್ದು, 2,700 ಖಾಲಿ ಇವೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Advertisement

X
Kannada Prabha
www.kannadaprabha.com