ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ಸಮೀಪದ ಕುರುಬರಹಳ್ಳಿಯಲ್ಲಿ ಅಪರಿಚತ ವ್ಯಕ್ತಿಯ ಶವವೊಂದು ಪತ್ತೆಯಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ನಿರ್ಮಾಣ ಹಂತದ ಕಟ್ಟಡದ ಮುಂದೆ ಮರಳಿನ ರಾಶಿ ಹಾಕಲಾಗಿದ್ದು, ಮರಳಿನ ರಾಶಿಯಡಿ ವ್ಯಕ್ತಿಯ ಮೃತದೇಹ ಪತ್ತೆಯಾಗಿತ್ತು. ಮರಳಿನಿಂದ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ನೆರೆಹೊರೆಯವರ, ಶವ ಇರುವಿಕೆಯನ್ನು ಪತ್ತೆ ಮಾಡಿ ಪೊಲೀರಿಗೆ ಮಾಹಿತಿ ನೀಡಿದ್ದರು.
ಸ್ಥಳದಲ್ಲಿ ಚಾಪೆ ಹಾಗೂ ಬೆಡ್ ಶೀಟ್ ಕೂಡ ಪತ್ತೆಯಾಗಿದೆ. ಮೃತ ವ್ಯಕ್ತಿ ಮರಳು ತಂದ ಲಾರಿಯಲ್ಲಿ ಮಲಗಿರಬಹುದು. ದೇಹದ ಮೇಲೆ ಯಾವುದೇ ಗಾಯಗಳೂ ಕಂಡು ಬಂದಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವೈದ್ಯಕೀಯ ವರದಿ ಬಂದ ನಂತರವಷ್ಟೇ ಸಾವಿಗೆ ಕಾರಣ ತಿಳಿದುಬರಲಿದೆ ಎಂದು ಪೊಲೀಸರು ಹೇಳಿದ್ದಾರೆ.
ಈ ಸಂಬಂಧ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.
Advertisement