ಹುಬ್ಬಳ್ಳಿ: ಉದ್ಯಮಿಯೊಬ್ಬರು ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯ ಗೋಕುಲ್ ರಸ್ತೆಯ ಇಂಡಸ್ಟ್ರಿಯಲ್ ಎಸ್ಟೇಟ್ನಲ್ಲಿ ನಡೆದಿದೆ.
ಮೃತನನ್ನು ಶ್ರೀನಿಧಿ ಸ್ಟೀಲ್ ವರ್ಕ್ನ ಮಾಲೀಕ ರವಿ ಮುರಗೋಡ ಎಂದು ಗುರುತಿಸಲಾಗಿದೆ. ರವಿ ಬ್ಯಾಂಕ್ ಹಾಗೂ ಖಾಸಗಿ ವ್ಯಕ್ತಿಗಳ ಬಳಿ ಸಾಲ ಪಡೆದಿದ್ದರು. ಇದೀಗ ಸಾಲ ಬಾಧೆಯಿಂದ ಬೇಸತ್ತು ಕೈಗಾರಿಕಾ ಪ್ರದೇಶದಲ್ಲಿನ ವರ್ಕ್ಶಾಪ್ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಗೋಕುಲ ರಸ್ತೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement