ಬೆಂಗಳೂರು ಉಪನಗರ ರೈಲು ಯೋಜನೆಯ ಮಲ್ಲಿಗೆ ಮಾರ್ಗದ ಕಾಮಗಾರಿ ವೇಗಗೊಳಿಸಲು ಎಲ್&ಟಿಗೆ ಸೂಚನೆ

ಬೆಂಗಳೂರು ಉಪನಗರ ರೈಲು ಯೋಜನೆಯ ಬೆನ್ನಿಗಾನಹಳ್ಳಿಯಿಂದ ಚಿಕ್ಕಬಾಣಾವರದವರೆಗಿನ ಮಲ್ಲಿಗೆ ಮಾರ್ಗದ (ಕಾರಿಡಾರ್-2) ಕಾಮಗಾರಿಯನ್ನು ವೇಗಗೊಳಿಸುವಂತೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಕೆ-ರೈಡ್ ವ್ಯವಸ್ಥಾಪಕ ನಿರ್ದೇಶಕ ಗೌರವ್ ಗುಪ್ತಾ ಅವರು ಗುತ್ತಿಗೆದಾರ ಸಂಸ್ಥೆ ಲಾರ್ಸನ್ ಮತ್ತು ಟೂಬ್ರೊಗೆ ಸೂಚಿಸಿದರು.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಬೆಂಗಳೂರು ಉಪನಗರ ರೈಲು ಯೋಜನೆಯ ಬೆನ್ನಿಗಾನಹಳ್ಳಿಯಿಂದ ಚಿಕ್ಕಬಾಣಾವರದವರೆಗಿನ ಮಲ್ಲಿಗೆ ಮಾರ್ಗದ (ಕಾರಿಡಾರ್-2) ಕಾಮಗಾರಿಯನ್ನು ವೇಗಗೊಳಿಸುವಂತೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ಕಂಪನಿ (ಕರ್ನಾಟಕ) ಲಿಮಿಟೆಡ್ ((ಕೆ-ರೈಡ್)) ವ್ಯವಸ್ಥಾಪಕ ನಿರ್ದೇಶಕ ಗೌರವ್ ಗುಪ್ತಾ ಅವರು ಮಂಗಳವಾರ ಗುತ್ತಿಗೆದಾರ ಸಂಸ್ಥೆ ಲಾರ್ಸನ್ ಮತ್ತು ಟೂಬ್ರೊಗೆ ಸೂಚಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಯೋಜನೆಯನ್ನು ಪೂರ್ಣಗೊಳಿಸಲು 40 ತಿಂಗಳ ಗಡುವನ್ನು ನಿಗದಿಪಡಿಸಿದ್ದಾರೆ. ಈಗಾಗಲೇ, 12 ತಿಂಗಳುಗಳಿಗಿಂತ ಹೆಚ್ಚು ಕಾಲ ಕಳೆದುಹೋಗಿರುವ ಕಾರಣ, ಈ ಗಡುವನ್ನು ಪೂರೈಸಲು ನಿರ್ಮಾಣ ಚಟುವಟಿಕೆಗಳಿಗೆ ವೇಗ ನೀಡಲು ಸಂಸ್ಥೆ ಬಯಸಿದೆ ಎಂದು ಕೆ-ರೈಡ್ ಮೂಲಗಳು ತಿಳಿಸಿವೆ.

ಈ ನಿಟ್ಟಿನಲ್ಲಿ ಗುಪ್ತಾ ಅವರು ಎಲ್ & ಟಿ ಅಧಿಕಾರಿಗಳು ಮತ್ತು ಕೆ-ರೈಡ್ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು.

ಯೋಜನೆಯು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಮಾನವಶಕ್ತಿಯನ್ನು ದ್ವಿಗುಣಗೊಳಿಸುವಂತೆ ಎಲ್&ಟಿ ಕಾರ್ಯನಿರ್ವಾಹಕರಿಗೆ ಗುಪ್ತಾ ಅವರು ಸೂಚಿಸಿದರು.

ಯೋಜನೆಗೆ ಎದುರಾಗಿರುವ ಅಡೆತಡೆಗಳನ್ನು ತೆರವುಗೊಳಿಸಲು, ವಿಶೇಷವಾಗಿ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಸಾಧಿಸಿರುವ ಪ್ರಗತಿ ಬಗ್ಗೆಯೂ ಅವರು ವಿಚಾರಿಸಿದರು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com