ಕ್ರೀಡಾಪಟುಗಳಿಗೆ ಎಲ್ಲಾ ಇಲಾಖೆಗಳ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ: ಸಿಎಂ ಸಿದ್ದರಾಮಯ್ಯ ಭರವಸೆ

ಇತ್ತೀಚೆಗೆ ಚೀನಾದಲ್ಲಿ ನಡೆದ 19ನೇ ಏಷ್ಯನ್‌ ಗೇಮ್ಸ್‌ನಲ್ಲಿ ಪದಕ ಪಡೆದ ರಾಜ್ಯದ ಕ್ರೀಡಾಪಟುಗಳು ಮತ್ತು ತರಬೇತುದಾರರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಸನ್ಮಾನಿಸಿ, ನಗದು ಪುರಸ್ಕಾರ ಪ್ರದಾನ ಮಾಡಿ ಅವರು ಮಾತನಾಡಿದರು.
ಕ್ರೀಡಾಪಟುಗಳಿಗೆ ಸಿಎಂ ಸನ್ಮಾನ
ಕ್ರೀಡಾಪಟುಗಳಿಗೆ ಸಿಎಂ ಸನ್ಮಾನ
Updated on

ಬೆಂಗಳೂರು: ಪ್ರಸ್ತುತ ಪೊಲೀಸ್‌ ಮತ್ತು ಅರಣ್ಯ ಇಲಾಖೆಯಲ್ಲಿ ಕ್ರೀಡಾಪಟುಗಳಿಗೆ ನೇಮಕಾತಿಯಲ್ಲಿ ಶೇ 3ರಷ್ಟು ಮೀಸಲಾತಿ ನೀಡಲಾಗುತ್ತಿದ್ದು, ಇತರ ಇಲಾಖೆಗಳಲ್ಲಿಯೂ ಶೇ 2 ರಷ್ಟು ಮೀಸಲಾತಿ ನೀಡುವ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇತ್ತೀಚೆಗೆ ಚೀನಾದಲ್ಲಿ ನಡೆದ 19ನೇ ಏಷ್ಯನ್‌ ಗೇಮ್ಸ್‌ನಲ್ಲಿ ಪದಕ ಪಡೆದ ರಾಜ್ಯದ ಕ್ರೀಡಾಪಟುಗಳು ಮತ್ತು ತರಬೇತುದಾರರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಸನ್ಮಾನಿಸಿ, ನಗದು ಪುರಸ್ಕಾರ ಪ್ರದಾನ ಮಾಡಿ ಅವರು ಮಾತನಾಡಿದರು.

'ದೇಶ ಮತ್ತು ರಾಜ್ಯದ ಗೌರವ ಹೆಚ್ಚು ಮಾಡಿದ್ದೀರಿ. ಸಮಸ್ತ ಕನ್ನಡಿಗರಿಗೆ ಹೆಮ್ಮೆಯ ವಿಷಯ. ಈ ಬಾರಿ ಚೀನಾದಲ್ಲಿ ನಡೆದ ಏಷ್ಯನ್‌ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು ಅತ್ಯಧಿಕ ಪದಕಗಳನ್ನು ಗೆದ್ದಿದ್ದಾರೆ. ಕಳೆದ ಬಾರಿ 70, ಈ ಬಾರಿ 107 ಪದಕ ಗೆದ್ದಿದ್ದಾರೆ. ರಾಜ್ಯದ ಎಂಟು ಮಂದಿ ಪದಕಗಳನ್ನು ಗೆದ್ದಿದ್ದಾರೆ.' ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

'ಇಡೀ ಜಗತ್ತಿನಲ್ಲಿ ಜನಸಂಖ್ಯೆಯಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. ಏಷ್ಯನ್‌ ಗೇಮ್ಸ್‌ನಲ್ಲಿಯೂ ಮೊದಲ-ಎರಡನೇ ಸ್ಥಾನ ಬಂದರೆ ಗೌರವ ಹೆಚ್ಚಾಗುತ್ತದೆ' ಎಂದೂ ಅಭಿಪ್ರಾಯಪಟ್ಟರು.

'ರಾಜ್ಯ ಸರ್ಕಾರ ಕ್ರೀಡೆಗೆ ಉತ್ತೇಜನ ನೀಡಲು ಬದ್ಧವಾಗಿದೆ. ನಾನು ಹಿಂದೆ ಮುಖ್ಯಮಂತ್ರಿ ಆಗಿದ್ದಾಗ ಏಷ್ಯನ್‌ ಗೇಮ್ಸ್‌, ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಬಹುಮಾನ ಮೊತ್ತ ನೀಡುವ ಕುರಿತು ಘೋಷಿಸಲಾಗಿತ್ತು. ಅತಿ ಹೆಚ್ಚು ಮೊತ್ತದ ಬಹುಮಾನ ಘೋಷಿಸಿದ ಮೊದಲ ರಾಜ್ಯ ನಮ್ಮದು' ಎಂದು ಅವರು ವಿವರಿಸಿದರು.

'ಈಗ ನಮ್ಮ ರಾಜ್ಯದಿಂದ ಎಂಟು ಮಂದಿ ಪದಕ ಪಡೆದಿದ್ದಾರೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆಲ್ಲುವುದು ಸಣ್ಣ ವಿಷಯವಲ್ಲ. ಇದಕ್ಕೆ ಅಪಾರ ಪರಿಶ್ರಮದ ಅಗತ್ಯವಿದೆ. ನೀವು ಅದ್ಭುತ ಸಾಧನೆ ಮಾಡಿದ್ದೀರಿ. ಒಲಿಂಪಿಕ್ಸ್‌ನಲ್ಲಿಯೂ ಪದಕ ಗೆಲ್ಲುವ ಪ್ರಯತ್ನ ಮಾಡಿ' ಎಂದು ಶುಭ ಹಾರೈಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com