ಅಕ್ಟೋಬರ್ 26 ರಂದು ಐಐಎಂ ಬೆಂಗಳೂರು ಸುವರ್ಣ ಮಹೋತ್ಸವಕ್ಕೆ ರಾಷ್ಟ್ರಪತಿ ಮುರ್ಮು ಚಾಲನೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಐಐಎಂ ಬೆಂಗಳೂರು ಸುವರ್ಣ ಮಹೋತ್ಸವ ಪ್ರತಿಷ್ಠಾನ ಸಪ್ತಾಹವನ್ನು ಅಕ್ಟೋಬರ್ 26 ರಂದು ಉದ್ಘಾಟಿಸಲಿದ್ದಾರೆ ಎಂದು ಉನ್ನತ ಶಿಕ್ಷಣ ಸಂಸ್ಥೆ ಗುರುವಾರ ತಿಳಿಸಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು
ರಾಷ್ಟ್ರಪತಿ ದ್ರೌಪದಿ ಮುರ್ಮು

ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಐಐಎಂ ಬೆಂಗಳೂರು ಸುವರ್ಣ ಮಹೋತ್ಸವ ಪ್ರತಿಷ್ಠಾನ ಸಪ್ತಾಹವನ್ನು ಅಕ್ಟೋಬರ್ 26 ರಂದು ಉದ್ಘಾಟಿಸಲಿದ್ದಾರೆ ಎಂದು ಉನ್ನತ ಶಿಕ್ಷಣ ಸಂಸ್ಥೆ ಗುರುವಾರ ತಿಳಿಸಿದೆ.

ಸುವರ್ಣ ಮಹೋತ್ಸವದ ಅಂಗವಾಗಿ ಐಐಎಂ ಬೆಂಗಳೂರು ಸರಣಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ.

ಮೊದಲ ದಿನ(ಅಕ್ಟೋಬರ್ 26) ಐಐಎಂಬಿ ಆಡಿಟೋರಿಯಂನಲ್ಲಿ ಸಂಜೆ 4 ರಿಂದ ಸಂಜೆ 5 ಗಂಟೆಯವರೆಗೆ ನಡೆಯಲಿರುವ ಸಮಾರಂಭದಲ್ಲಿ ರಾಷ್ಟ್ರಪತಿ ಮುರ್ಮು ಅವರು ಕಾರ್ಯಕ್ರಮ ಉದ್ಘಾಟಿಸಿ ಭಾಷಣ ಮಾಡಲಿದ್ದಾರೆ. ನಂತರ ಐಐಎಂಬಿ ಕ್ಯಾಂಪಸ್‌ನಲ್ಲಿ ಪುಸ್ತಕ ಬಿಡುಗಡೆ ಹಾಗೂ ಚಲನಚಿತ್ರ ಪ್ರದರ್ಶನ ನಡೆಯಲಿದೆ.

ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಐಐಎಂ ಬೆಂಗಳೂರು ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿ ಮತ್ತು ಐಐಎಂ ಬೆಂಗಳೂರು ನಿರ್ದೇಶಕ ಪ್ರೊ ರಿಷಿಕೇಶ ಟಿ ಕೃಷ್ಣನ್ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com