ಚಿಕ್ಕಬಳ್ಳಾಪುರ: ಪತ್ನಿ ಮತ್ತು ಅತ್ತೆ ಕಿರುಕುಳು ನೀಡುತ್ತಿದ್ದಾರೆ ಎಂದು ಆರೋಪಿ ವ್ಯಕ್ತಿಯೋರ್ವ ಫೇಸ್ ಬುಕ್ ಲೈವ್ ಮಾಡಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ನಗರದ 17ನೇ ವಾರ್ಡ್ನಲ್ಲಿ ಈ ಘಟನೆ ನಡೆದಿದ್ದು ಮೃತನನ್ನು ಕೆ ವೆಂಕಟೇಶ್ ಎಂದು ಗುರುತಿಸಲಾಗಿದೆ. ವೆಂಕಟೇಶ್ ತನ್ನ ಪತ್ನಿ ಶಿಲ್ಪಾ ಮತ್ತು ಅತ್ತೆ ಅಶ್ವತ್ಥಮ್ಮ ನೀನು ಸತ್ತೋಗು, ನೀನು ಬದುಕಿದ್ದರೆ ನಮಗೆ ನೆಮ್ಮದಿಯಿಲ್ಲ ಹೀಯಾಳಿಸುತ್ತಿದ್ದರು. ಹೀಗಾಗಿ ನಾನು ಸಾಯಲು ನಿರ್ಧರಿಸಿದ್ದೇನೆ ಎಂದು ವೆಂಕಟೇಶ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಮಗನ ಸಾವಿನ ಸಂಬಂಧ ತಾಯಿ ಮಂಜುಳ ಎಂಬುವವರು ಚಿಕ್ಕಬಳ್ಳಾಪುರ ನಗರ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ತನಿಖೆ ಶುರು ಮಾಡಿದ್ದಾರೆ.
Advertisement