ಬೆಂಗಳೂರು: ಆಯುಧ ಪೂಜೆ ಅಂಗವಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ದುಬಾರಿ ಬೆಲೆಯ ಕಾರುಗಳಿಗೆ ಪೂಜೆ ಸಲ್ಲಿಸಿದ್ದಾರೆ.
ಬಿಡದಿಯ ತೋಟದ ಮನೆಯಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ರೇಂಜ್ ರೋವರ್ ಸೇರಿದಂತೆ ಕೋಟ್ಯಂತರ ರೂ. ಬೆಲೆ ಬಾಳುವ ದುಬಾರಿ ಕಾರುಗಳು, ಕ್ರಷರ್ ಗಳಿಗೆ ಪೂಜೆ ಸಲ್ಲಿಸಿದ್ದಾರೆ. ಈ ಕುರಿತ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ.
ಮತ್ತೊಂದೆಡೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡಾ ತಮ್ಮ ನಿವಾಸದಲ್ಲಿ ಆಯುಧ ಪೂಜೆ ಮಾಡಿದ್ದಾರೆ. ಬೆಂಗಳೂರಿನ ನಿವಾಸದಲ್ಲಿ ಮೊದಲಿಗೆ ದೇವರ ಪೂಜೆ ಮಾಡಿದ ನಂತರ ಕುಟುಂಬಸ್ಥರೊಂದಿಗೆ ವಾಹನಗಳ ಪೂಜೆ ನೆರವೇರಿಸಿದರು. ಬಳಿಕ ಬಸವಣ್ಣನ ಆಶೀರ್ವಾದ ಪಡೆದರು.
Advertisement