ಆಯುಧ ಪೂಜೆ ಸಂಭ್ರಮ: ದುಬಾರಿ ಬೆಲೆಯ ಕಾರುಗಳಿಗೆ ಪೂಜೆ ಸಲ್ಲಿಸಿದ ಕುಮಾರಸ್ವಾಮಿ!

ಆಯುಧ ಪೂಜೆ ಅಂಗವಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ದುಬಾರಿ ಬೆಲೆಯ ಕಾರುಗಳಿಗೆ ಪೂಜೆ ಸಲ್ಲಿಸಿದ್ದಾರೆ.
ಎಚ್ ಡಿ ಕುಮಾರಸ್ವಾಮಿ
ಎಚ್ ಡಿ ಕುಮಾರಸ್ವಾಮಿ
Updated on

ಬೆಂಗಳೂರು: ಆಯುಧ ಪೂಜೆ ಅಂಗವಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ದುಬಾರಿ ಬೆಲೆಯ ಕಾರುಗಳಿಗೆ ಪೂಜೆ ಸಲ್ಲಿಸಿದ್ದಾರೆ.

ಬಿಡದಿಯ ತೋಟದ ಮನೆಯಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ರೇಂಜ್ ರೋವರ್ ಸೇರಿದಂತೆ ಕೋಟ್ಯಂತರ ರೂ. ಬೆಲೆ ಬಾಳುವ ದುಬಾರಿ ಕಾರುಗಳು, ಕ್ರಷರ್ ಗಳಿಗೆ ಪೂಜೆ ಸಲ್ಲಿಸಿದ್ದಾರೆ. ಈ ಕುರಿತ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ.

ಮತ್ತೊಂದೆಡೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡಾ ತಮ್ಮ ನಿವಾಸದಲ್ಲಿ ಆಯುಧ ಪೂಜೆ ಮಾಡಿದ್ದಾರೆ. ಬೆಂಗಳೂರಿನ ನಿವಾಸದಲ್ಲಿ ಮೊದಲಿಗೆ ದೇವರ ಪೂಜೆ ಮಾಡಿದ ನಂತರ ಕುಟುಂಬಸ್ಥರೊಂದಿಗೆ ವಾಹನಗಳ ಪೂಜೆ ನೆರವೇರಿಸಿದರು. ಬಳಿಕ ಬಸವಣ್ಣನ ಆಶೀರ್ವಾದ ಪಡೆದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com