ತುಮಕೂರು: ಹಾಸ್ಟೆಲ್‌ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

ತುಮಕೂರಿನ ಸಿದ್ಧಾರ್ಥ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಎಸ್‌ಎಸ್‌ಐಟಿ)ಯ ಹಾಸ್ಟೆಲ್ ಕೊಠಡಿಯಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರು ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...
ಬನಸಿರಿ
ಬನಸಿರಿ
Updated on

ತುಮಕೂರು: ತುಮಕೂರಿನ ಸಿದ್ಧಾರ್ಥ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಎಸ್‌ಎಸ್‌ಐಟಿ)ಯ ಹಾಸ್ಟೆಲ್ ಕೊಠಡಿಯಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರು ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ನಡೆದಿದೆ.

ದೂರಸಂಪರ್ಕ ಇಂಜಿನಿಯರಿಂಗ್‌ ವಿಭಾಗದಲ್ಲಿ 3ನೇ ಸೆಮಿಸ್ಟರ್‌ ಓದುತ್ತಿದ್ದ ಬನಸಿರಿ(20) ಅವರು ನಿನ್ನೆ ರಾತ್ರಿ ಊಟದ ನಂತರ ತನ್ನ ಕೋಣೆಗೆ ತೆರಳಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸ್ಥಳಕ್ಕೆ ತಿಲಕ್ ಪಾರ್ಕ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಮರಣೋತ್ತರ ಪರೀಕ್ಷೆ ಬಳಿಕ ಶವವನ್ನು ಪೋಷಕರಿಗೆ ಒಪ್ಪಿಸಿದ್ದಾರೆ.

ಬನಸಿರಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ ಅವರು ಏಳು ಬ್ಯಾಕ್‌ಲಾಗ್ ಪೇಪರ್‌ಗಳನ್ನು ಉಳಿಸಿಕೊಂಡಿದ್ದರು ಮತ್ತು ಅದರಲ್ಲಿ ಒಂದನ್ನು ಮಾತ್ರ ಪಾಸ್ ಮಾಡಿದ್ದರು. ಇದರಿಂದ ತೀವ್ರ ಒತ್ತಡಕ್ಕೆ ಸಿಲುಕಿದ್ದರು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com