ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ಸಿಗೆ ಇಬ್ಬರು ಬಲಿ

ಬಿಎಂಟಿಸಿ ಬಸ್ಸು ಹರಿದು ಬೆಂಗಳೂರಿನಲ್ಲಿ ಇಂದು ಭಾನುವಾರ ಮತ್ತೊಂದು ಬಲಿಯಾಗಿದೆ. ವೀಣಾ ಎಂಬುವವರು ಬಿಎಂಟಿಸಿ ಬಸ್​ಗೆ ಮೃತಪಟ್ಟಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಬಿಎಂಟಿಸಿ ಬಸ್ಸು ಹರಿದು ಬೆಂಗಳೂರಿನಲ್ಲಿ ಇಂದು ಭಾನುವಾರ ಮತ್ತೊಂದು ಬಲಿಯಾಗಿದೆ. ವೀಣಾ ಎಂಬುವವರು ಬಿಎಂಟಿಸಿ ಬಸ್​ಗೆ ಮೃತಪಟ್ಟಿದ್ದಾರೆ. ಹುಳಿಮಾವು ಸಂಚಾರಿ ಠಾಣಾ ವ್ಯಾಪ್ತಿಯ ಅರಕೆರೆಯ ಶ್ರೀ ಸಾಯಿ ಗಾರ್ಮೆಂಟ್ಸ್ ಬಳಿ ರಸ್ತೆ ದಾಟುವಾಗ ಮಹಿಳೆಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಈ ಪರಿಣಾಮ ವೀಣಾ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.

ಇದಕ್ಕೂ ಮುನ್ನ ಬೆಂಗಳೂರಿನ ವಿಜಯನಗರದಲ್ಲಿ ಬೈಕ್ ಸವಾರ ಕುಮಾರ್ ಎಂಬುವವರು ಬಿಎಂಟಿಸಿ ಬಸ್ಸು ಡಿಕ್ಕಿ ಹೊಡೆದು ಬಸ್ ನ ಚಕ್ರಕ್ಕೆ ಸಿಲುಕಿ ಮೃತಪಟ್ಟಿರುವ ಘಟನೆ ನಡೆದಿದೆ. ವಿಜಯನಗರದ ಗೋವಿಂದರಾಜನಗರ ಬೈಟು ಕಾಫಿ ಮುಂಭಾಗ ಹೋಗುತ್ತಿದ್ದ ವೇಳೆ ಬಿಎಂಟಿಸಿ ಬಸ್ ನ ಚಕ್ರ ಬೈಕ್ ಸವಾರ ಕುಮಾರ್ ಮೇಲೆ ಹರಿದು ಸ್ಥಳದಲ್ಲಿಯೇ ಮೃತಪಟ್ಟರು.

ಸ್ಥಳಕ್ಕೆ ವಿಜಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com