ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ಸಿಗೆ ಇಬ್ಬರು ಬಲಿ

ಬಿಎಂಟಿಸಿ ಬಸ್ಸು ಹರಿದು ಬೆಂಗಳೂರಿನಲ್ಲಿ ಇಂದು ಭಾನುವಾರ ಮತ್ತೊಂದು ಬಲಿಯಾಗಿದೆ. ವೀಣಾ ಎಂಬುವವರು ಬಿಎಂಟಿಸಿ ಬಸ್​ಗೆ ಮೃತಪಟ್ಟಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಬಿಎಂಟಿಸಿ ಬಸ್ಸು ಹರಿದು ಬೆಂಗಳೂರಿನಲ್ಲಿ ಇಂದು ಭಾನುವಾರ ಮತ್ತೊಂದು ಬಲಿಯಾಗಿದೆ. ವೀಣಾ ಎಂಬುವವರು ಬಿಎಂಟಿಸಿ ಬಸ್​ಗೆ ಮೃತಪಟ್ಟಿದ್ದಾರೆ. ಹುಳಿಮಾವು ಸಂಚಾರಿ ಠಾಣಾ ವ್ಯಾಪ್ತಿಯ ಅರಕೆರೆಯ ಶ್ರೀ ಸಾಯಿ ಗಾರ್ಮೆಂಟ್ಸ್ ಬಳಿ ರಸ್ತೆ ದಾಟುವಾಗ ಮಹಿಳೆಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಈ ಪರಿಣಾಮ ವೀಣಾ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.

ಇದಕ್ಕೂ ಮುನ್ನ ಬೆಂಗಳೂರಿನ ವಿಜಯನಗರದಲ್ಲಿ ಬೈಕ್ ಸವಾರ ಕುಮಾರ್ ಎಂಬುವವರು ಬಿಎಂಟಿಸಿ ಬಸ್ಸು ಡಿಕ್ಕಿ ಹೊಡೆದು ಬಸ್ ನ ಚಕ್ರಕ್ಕೆ ಸಿಲುಕಿ ಮೃತಪಟ್ಟಿರುವ ಘಟನೆ ನಡೆದಿದೆ. ವಿಜಯನಗರದ ಗೋವಿಂದರಾಜನಗರ ಬೈಟು ಕಾಫಿ ಮುಂಭಾಗ ಹೋಗುತ್ತಿದ್ದ ವೇಳೆ ಬಿಎಂಟಿಸಿ ಬಸ್ ನ ಚಕ್ರ ಬೈಕ್ ಸವಾರ ಕುಮಾರ್ ಮೇಲೆ ಹರಿದು ಸ್ಥಳದಲ್ಲಿಯೇ ಮೃತಪಟ್ಟರು.

ಸ್ಥಳಕ್ಕೆ ವಿಜಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com