ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಬೆಳಗಾವಿವರೆಗೆ ವಿಸ್ತರಿಸಿ: ಕೇಂದ್ರ ರೈಲ್ವೆ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು ಸಂಚಾರವನ್ನು ಬೆಳಗಾವಿಯವರೆಗೂ ವಿಸ್ತರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು ಸಂಚಾರವನ್ನು ಬೆಳಗಾವಿಯವರೆಗೂ ವಿಸ್ತರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಬೆಂಗಳೂರಿನಿಂದ ಹುಬ್ಬಳ್ಳಿ ಧಾರವಾಡದವರೆಗೆ ಇರುವ ವಂದೇ ಭಾರತ್ ರೈಲು ಸಂಪರ್ಕವನ್ನು ಬೆಳಗಾವಿ ತನಕ ವಿಸ್ತರಣೆ ಮಾಡುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ. ವಂದೇ ಭಾರತ್ ರೈಲು ಸಂಪರ್ಕ ವಿಸ್ತರಣೆಯಿಂದ ಬೆಳಗಾವಿ ಜಿಲ್ಲೆಗೆ ಸಾಕಷ್ಟು ಅನುಕೂಲವಾಗಲಿದೆ ಎಂದಿದ್ದಾರೆ.

ಬೆಳಗಾವಿ ಜಿಲ್ಲೆಯ ತನಕ ವಿಸ್ತರಣೆ ಮಾಡಿದರೆ ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳಿಗೂ ಉತ್ತಮ ಸಂಪರ್ಕ ಕಲ್ಪಿಸಲು ಅನುಕೂಲವಾಗಲಿದೆ. ಹೀಗಾಗಿ ವಂದೇ ಭಾರತ್ ರೈಲು ಸಂಪರ್ಕವನ್ನು ಹುಬ್ಬಳ್ಳಿ – ಧಾರವಾಡದಿಂದ ಬೆಳಗಾವಿ ತನಕ ವಿಸ್ತರಣೆ ಮಾಡುವಂತೆ ಮನವಿ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com