ನವಜಾತ ಶಿಶುಗಳಿಗೆ ಆಂಬ್ಯುಲೆನ್ಸ್ ಸೇವೆ: ಟೆಲಿ-ಎನ್‌ಐಸಿಯು ಸೇವೆ ಆರಂಭಿಸಿದ ಸರ್ಕಾರ!

ರಾಜ್ಯದಲ್ಲಿ ನವಜಾತ ಶಿಶುಗಳ ಆರೈಕೆ ಸೇವೆಗಳನ್ನು ಸುಧಾರಿಸುವ ಉದ್ದೇಶದಿಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಬೆಂಗಳೂರಿನಲ್ಲಿ ಮಣಿಪಾಲ್ ಆಂಬ್ಯುಲೆನ್ಸ್ ರೆಸ್ಪಾನ್ಸ್ ಸೇವೆ - ನಿಯೋನಾಟಲ್ ಕೇರ್ ಆನ್ ವೀಲ್ಸ್ (ಮಾರ್ಸ್-ನೌ) ಗೆ ಚಾಲನೆ ನೀಡಿದರು.
ಮಣಿಪಾಲ್ ಆಸ್ಪತ್ರೆಯಲ್ಲಿ ನವಜಾತ ಶಿಶುಗಳ ತುರ್ತು ಚಿಕಿತ್ಸೆಯ ಸೌಲಭ್ಯಗಳನ್ನುಒಳಗೊಂಡಿರುವ ಅತ್ಯಾಧುನಿಕ ಆ್ಯಂಬುಲೆನ್ಸ್ ಲೋಕಾರ್ಪಣೆಗೊಳಿಸಿದ ಆರೋಗ್ಯ ಸಚಿವ.
ಮಣಿಪಾಲ್ ಆಸ್ಪತ್ರೆಯಲ್ಲಿ ನವಜಾತ ಶಿಶುಗಳ ತುರ್ತು ಚಿಕಿತ್ಸೆಯ ಸೌಲಭ್ಯಗಳನ್ನುಒಳಗೊಂಡಿರುವ ಅತ್ಯಾಧುನಿಕ ಆ್ಯಂಬುಲೆನ್ಸ್ ಲೋಕಾರ್ಪಣೆಗೊಳಿಸಿದ ಆರೋಗ್ಯ ಸಚಿವ.
Updated on

ಬೆಂಗಳೂರು: ರಾಜ್ಯದಲ್ಲಿ ನವಜಾತ ಶಿಶುಗಳ ಆರೈಕೆ ಸೇವೆಗಳನ್ನು ಸುಧಾರಿಸುವ ಉದ್ದೇಶದಿಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಬೆಂಗಳೂರಿನಲ್ಲಿ ಮಣಿಪಾಲ್ ಆಂಬ್ಯುಲೆನ್ಸ್ ರೆಸ್ಪಾನ್ಸ್ ಸರ್ವೀಸ್ - ನಿಯೋನಾಟಲ್ ಕೇರ್ ಆನ್ ವೀಲ್ಸ್ (MARS-NOW) ಗೆ ಚಾಲನೆ ನೀಡಿದರು.

ಬೆಂಗಳೂರು ಮತ್ತು ನಗರದ ಹೊರವಲಯದಲ್ಲಿ ನವಜಾತ ಶಿಶುಗಳ ಆರೈಕೆಗಾಗಿ ಈ ಆ್ಯಂಬುಲೆನ್ಸ್ ಸೇವೆಗಳನ್ನು ಪ್ರಾರಂಭಿಸಲಾಗಿದೆ.

ಆ್ಯಂಬುಲೆನ್ಸ್ ಗಳಲ್ಲಿ ಶಿಶು ಇನ್ಕ್ಯುಬೇಟರ್‌ಗಳು, ಹೃದಯ ಮತ್ತು ಶ್ವಾಸಕೋಶದ ಮಾನಿಟರ್‌ಗಳು, ಹೈ ಫ್ರೀಕ್ವೆನ್ಸಿ, ವೆಂಟಿಲೇಟರ್‌ಗಳು, ನೈಟ್ರಿಕ್ ಆಕ್ಸೈಡ್ ಅಡ್ಮಿನಿಸ್ಟ್ರೇಷನ್, ಬ್ಲಾಂಕೆಟ್ ವಾರ್ಮರ್‌ಗಳು ಮತ್ತು ಸುಗಮ ಪ್ರಯಾಣಕ್ಕಾಗಿ ಅಗತ್ಯ ಸೇವೆಗಳನ್ನು ಇರಿಸಲಾಗಿದೆ. ತುರ್ತು ಸಮಯದಲ್ಲಿ ಸೂಕ್ತ ಚಿಕಿತ್ಸೆ ನೀಡಿ ಮಕ್ಕಳ ಆರೋಗ್ಯ ಕಾಪಾಡಲು ಇದು ಸಹಾಯ ಮಾಡುತ್ತವೆ ಎಂದು ದಿನೇಶ್ ಗುಂಡೂರಾವ್ ಅವರು ಹೇಳಿದರು.

ಸಾಧ್ಯವಾದಷ್ಟು ಕಡಿಮೆ ಬೆಲೆಯಲ್ಲಿ ಉತ್ತಮ ಚಿಕಿತ್ಸೆಯನ್ನು ಖಚಿತಪಡಿಸಿಕೊಳ್ಳಲು ಖಾಸಗಿ ವಲಯದೊಂದಿಗೆ ಕೈಜೋಡಿಸಿ ಕೆಲಸ ಮಾಡಲು ಸರ್ಕಾರ ಮುಕ್ತವಾಗಿದೆ ಎಂದು ತಿಳಿಸಿದರು.

ಮಣಿಪಾಲ್ ಆಸ್ಪತ್ರೆಯು ಸಹಾಯವಾಣಿ (080-22221111) ಸೇವೆಯನ್ನು ಪ್ರಾರಂಭಿಸಿದ್ದು, ಇದನ್ನು ಕಡಿಮೆ ಸೌಲಭ್ಯವಿರುವ ಖಾಸಗಿ ಆಸ್ಪತ್ರೆಗಳು ಕೂಡ ಬಳಕೆ ಮಾಡಬಹುದು. MARS-NOW ಮೂಲಕ ಮಕ್ಕಳನ್ನು ಆಸ್ಪತ್ರೆಗಳಿಗೆ ದಾಖಲಿಸಬಹುದು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com