ಸಂಕಷ್ಟದ ಸಮಯದಲ್ಲಿ ತಮಿಳುನಾಡಿಗೆ ನೀರು ಬಿಡಲು ಮೇಕೆದಾಟು ಯೋಜನೆ ನೆರವಾಗಲಿದೆ: ಸಿಎಂ ಸಿದ್ದರಾಮಯ್ಯ

68 ಟಿಎಂಸಿ ಅಡಿ ಕಾವೇರಿ ನೀರು ಸಂಗ್ರಹಿಸಲು ಉದ್ದೇಶಿಸಿರುವ ಮೇಕೆದಾಟು ಯೋಜನೆಯಿಂದ ಸಂಕಷ್ಟದ ಸಮಯದಲ್ಲಿ ತಮಿಳುನಾಡಿಗೆ ನೀರು ಬಿಡಲು ಕರ್ನಾಟಕಕ್ಕೆ ಸಹಕಾರಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದರು.
ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಶನಿವಾರ ಸಿಎಂ ಸಿದ್ದರಾಮಯ್ಯ ಅವರನ್ನು ಸ್ವಾಗತಿಸಿದರು.
ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಶನಿವಾರ ಸಿಎಂ ಸಿದ್ದರಾಮಯ್ಯ ಅವರನ್ನು ಸ್ವಾಗತಿಸಿದರು.
Updated on

ಬಳ್ಳಾರಿ: 68 ಟಿಎಂಸಿ ಅಡಿ ಕಾವೇರಿ ನೀರು ಸಂಗ್ರಹಿಸಲು ಉದ್ದೇಶಿಸಿರುವ ಮೇಕೆದಾಟು ಯೋಜನೆಯಿಂದ ಸಂಕಷ್ಟದ ಸಮಯದಲ್ಲಿ ತಮಿಳುನಾಡಿಗೆ ನೀರು ಬಿಡಲು ಕರ್ನಾಟಕಕ್ಕೆ ಸಹಕಾರಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಆರ್‌ಎಸ್ ಮತ್ತು ಕಬಿನಿ ಜಲಾಶಯಗಳಲ್ಲಿ ನೀರು ಸಂಗ್ರಹವಾಗದ ಕಾರಣ ತಮಿಳುನಾಡಿಗೆ ನೀರು ಬಿಡುವುದು ಕಷ್ಟವಾಗಿದೆ. ಇದಲ್ಲದೆ, ರಾಜ್ಯವು ಬರಗಾಲದಂತಹ ಪರಿಸ್ಥಿತಿಯನ್ನು ಎದುರಿಸುತ್ತಿದೆ. ನಗರಗಳು ಮತ್ತು ಪಟ್ಟಣಗಳಲ್ಲಿ ನೀರಾವರಿ ಮತ್ತು ಕುಡಿಯುವ ಉದ್ದೇಶಗಳಿಗಾಗಿ ನೀರನ್ನು ಒದಗಿಸಲು ರಾಜ್ಯಕ್ಕೆ ಸಂಕಷ್ಟ ಎದುರಾಗುತ್ತಿದೆ ಎಂದು ಹೇಳಿದರು.

ಕಾವೇರಿ ನೀರು ವಿಚಾರವಾಗಿ ಆದಷ್ಟು ಬೇಗ ಕೇಂದ್ರ ಸರ್ಕಾರ ಸಭೆ ಕರೆಯಬೇಕು. ಮೇಕೆದಾಟು ಯೋಜನೆಗೆ ಶೀಘ್ರ ಮಂಜೂರಾತಿ ನೀಡಬೇಕು ಎಂದು ಆಗ್ರಹಿಸಿದರು.

“ಮುಂಗಾರು ದುರ್ಬಲವಾಗಿರುವ ಕಾರಣ ರಾಜ್ಯದ ಜಲಾಶಯಗಳಿಗೆ ಒಳಹರಿವು ಕುಸಿತಗೊಂಡಿದೆ. ನೀರಾವರಿ ಮತ್ತು ಕುಡಿಯುವ ಉದ್ದೇಶಕ್ಕೆ ನೀರು ಇದ್ದಿದ್ದರೆ ತಮಿಳುನಾಡಿಗೆ ನೀರು ಬಿಡುತ್ತಿದ್ದೆವು. ದುರದೃಷ್ಟವಶಾತ್ ಈ ಬಾರಿ ಜುಲೈ ಮತ್ತು ಆಗಸ್ಟ್‌ನಲ್ಲಿ ಮುಂಗಾರು ದುರ್ಬಲವಾಗಿತ್ತು. ಮೇಕೆದಾಟು ಯೋಜನೆಯು ತಮಿಳುನಾಡಿನ ನೀರಿನ ಬೇಡಿಕೆಯನ್ನು ಪೂರೈಸಲು ನಮಗೆ ಸಹಾಯ ಮಾಡುತ್ತದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com