ಹಿಂಬದಿಯಿಂದ ಬೈಕಿನಲ್ಲಿ ಬಂದು ಮೊಬೈಲ್ ಕಸಿದು ಪರಾರಿಯಾದ ಕಳ್ಳರು

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಯೊಬ್ಬರ ಹಿಂದೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಮೊಬೈಸ ಕಸಿದು ಪರಾರಿಯಾಗಿರುವ ಘಟನೆಯೊಂದು ನಗರದ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಯೊಬ್ಬರ ಹಿಂದೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಮೊಬೈಸ ಕಸಿದು ಪರಾರಿಯಾಗಿರುವ ಘಟನೆಯೊಂದು ನಗರದ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ.

ಮಡಿವಾಳ ನಿವಾಸಿ ಸೌರಭ್ ಕುಮಾರ್ ಅವರು ರಿಂಗ್ ರೋಡ್ ಮೂಲಕ ಸಿಲ್ಕ್ ಬೋರ್ಡ್'ಗೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಸೌರಭ್ ಅವರ ಫೋನ್ ಕಸಿದು ಪರಾರಿಯಾಗಿದ್ದಾರೆ.

ಈ ಸಂಬಂಧ ಸುದ್ದಗುಂಟೆಪಾಳ್ಯ ಪೊಲೀಸರು ದೂರು ದಾಖಲಿಸಿಕೊಂಡು, ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com