ಬೆಂಗಳೂರು: ರೆಸ್ಟೋರೆಂಟ್‌ನಲ್ಲಿ ದುಷ್ಕರ್ಮಿಗಳಿಂದ ಹರಿತವಾದ ಆಯುಧಗಳಿಂದ ವ್ಯಕ್ತಿ ಮೇಲೆ ಹಲ್ಲೆ!

ಸೋಮವಾರ ಸಂಜೆ ಇಲ್ಲಿನ ರೆಸ್ಟೋರೆಂಟ್‌ ಒಂದರಲ್ಲಿ ಅಪರಿಚಿತ ದುಷ್ಕರ್ಮಿಗಳು ವ್ಯಕ್ತಿಯೊಬ್ಬನ ಮೇಲೆ ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಸೋಮವಾರ ಸಂಜೆ ಇಲ್ಲಿನ ರೆಸ್ಟೋರೆಂಟ್‌ ಒಂದರಲ್ಲಿ ಅಪರಿಚಿತ ದುಷ್ಕರ್ಮಿಗಳು ವ್ಯಕ್ತಿಯೊಬ್ಬನ ಮೇಲೆ ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತನನ್ನು ತಮಿಳುನಾಡಿನ ಮಧುರೈ ಮೂಲದ ವಿಕೆ ಗುರುಸಾಮಿ ಎಂದು ಗುರುತಿಸಲಾಗಿದೆ.

ಗುರುಸ್ವಾಮಿ ಅವರು ಸುಖ ಸಾಗರ್ ರೆಸ್ಟೊರೆಂಟ್‌ನಲ್ಲಿದ್ದ ಸಂದರ್ಭದಲ್ಲಿ ಅಪರಿಚಿತ ದುಷ್ಕರ್ಮಿಗಳು ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಬೆಂಗಳೂರು ಪೂರ್ವದ ಉಪ ಪೊಲೀಸ್ ಆಯುಕ್ತ ಭೀಮಾಶಂಕರ್ ಗುಳೇದ್ ತಿಳಿಸಿದ್ದಾರೆ.

ಪೊಲೀಸರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಶಸ್ತ್ರ ಚಿಕಿತ್ಸೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಗುರುಸಾಮಿ ಕ್ರಿಮಿನಲ್ ಗ್ಯಾಂಗ್‌ನ ಭಾಗವಾಗಿದ್ದು, ಆತ ಮತ್ತು ಆತನ ತಂಡದ ಸದಸ್ಯರು ವಿವಿಧ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು. ಅವರ ಹತ್ಯೆಗೆ ಪ್ರತಿಸ್ಪರ್ಧಿ ಗ್ಯಾಂಗ್ ಯೋಜನೆ ರೂಪಿಸಿತ್ತು ಎಂದು ಡಿಸಿಪಿ ತಿಳಿಸಿದ್ದಾರೆ.

ಎರಡು ಗ್ಯಾಂಗ್‌ಗಳು ಕಳೆದ 35 ವರ್ಷಗಳಿಂದ ಪ್ರತಿಸ್ಪರ್ಧಿಗಳಾಗಿವೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com