ಪತ್ನಿಯ ಅಂತ್ಯಕ್ರಿಯೆ ನೆರವೇರಿಸಿ ಬಂದ ಪತಿಗೆ ಶಾಕ್: ಮನೆಯಲ್ಲಿದ್ದ ಚಿನ್ನಾಭರಣಗಳು ಕಳವು

ಪತ್ನಿಯ ಅಂತ್ಯಕ್ರಿಯೆ ನೆರವೇರಿಸಿ ಮನೆಗೆ ವಾಪಸ್ಸಾದ ವೇಳೆ ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳನ್ನು ಕಳ್ಳತನವಾಗಿರುವ ಘಟನೆಯೊಂದು ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಪತ್ನಿಯ ಅಂತ್ಯಕ್ರಿಯೆ ನೆರವೇರಿಸಿ ಮನೆಗೆ ವಾಪಸ್ಸಾದ ವೇಳೆ ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳನ್ನು ಕಳ್ಳತನವಾಗಿರುವ ಘಟನೆಯೊಂದು ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ.

ಮಾಗಡಿ ರಸ್ತೆಯ ಗೋಪಾಲಪುರ 2ನೇ ಕ್ರಾಸ್ ನಿವಾಸಿ ಆಟೋ ಚಾಲಕ ಎಸ್ ರಾಮಾಂಜಿ (50) ಎಂಬುವರ ಮನೆಯಲ್ಲಿದ್ದ ಚಿನ್ನಾಭರಣಗಳು ಕಳ್ಳತನವಾಗಿವೆ. ಆ.30ರ ಮಧ್ಯಾಹ್ನ 1.30ರಿಂದ 5 ಗಂಟೆಯ ನಡುವೆ ಘಟನೆ ನಡೆದಿದೆ.

ದೀರ್ಘಾಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ರಾಮಾಂಜಿ ಅವರ ಪತ್ನಿ ಭಾಗ್ಯಮ್ಮ ಅವರು, ಆಗಸ್ಟ್ 30ರಂದು ನಿಧನರಾಗಿದ್ದು, ಶವವನ್ನು ಮನೆಯ ಹೊರಗೆ ಇರಿಸಲಾಗಿತ್ತು. ಸಂಜೆ ವೇಳೆ ಪತ್ನಿಯ ಅಂತ್ಯ ಸಂಸ್ಕಾರ ನೆರವೇರಿಸಲಾಗಿತ್ತು. ಇದನ್ನೇ ತಮ್ಮ ಲಾಭಕ್ಕಾಗಿ ಬಳಸಿಕೊಂಡಿರುವ ಆರೋಪಿಗಳು, ಚಿನ್ನಾಭರಣ ಮತ್ತು ನಗದು ದೋಚಿದ್ದಾರೆ.

ಪತ್ನಿಯ ಅಂತಿಮ ವಿಧಿವಿಧಾನದ ಬಳಿಕ ರಾಮಾಂಜಿ ಅವರು ಮನೆಗೆ ವಾಪಸ್ಸಾಗಿದ್ದು, ಈ ವೇಳೆ ಅಲ್ಮೇರಾದಲ್ಲಿಟ್ಟಿದ್ದ ಆಭರಣಗಳು ಕಳ್ಳತನವಾಗಿರುವುದು ಕಂಡು ಬಂದಿದೆ. ಕೂಡಲೇ ಪೊಲೀಸರಿಗೆ ಮಾಗಡಿ ರಸ್ತೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com