ನೆಟೆ ರೋಗ ಸಂತ್ರಸ್ತರಿಗೆ ಪರಿಹಾರ ಹಣ ಬಿಡುಗಡೆ: ಸಚಿವ ಎನ್. ಚೆಲುವರಾಯಸ್ವಾಮಿ

ಉತ್ತರ ಕರ್ನಾಟಕದ ಕಲ್ಬುರ್ಗಿ, ವಿಜಾಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನೆಟೆ  ರೋಗದಿಂದ ಕಳೆದ ಸಾಲಿನಲ್ಲಿ  ತೊಗರಿ ಬೆಳೆ ಹಾನಿಯಿಂದ ನಷ್ಟ ಅನುಭವಿಸಿದ್ದ ರೈತರಿಗೆ  ಬಾಕಿ ಇದ್ದ ಪರಿಹಾರ ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.
ಎನ್. ಚೆಲುವರಾಯಸ್ವಾಮಿ
ಎನ್. ಚೆಲುವರಾಯಸ್ವಾಮಿ

ಬೆಂಗಳೂರು: ಉತ್ತರ ಕರ್ನಾಟಕದ ಕಲ್ಬುರ್ಗಿ, ವಿಜಾಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನೆಟೆ  ರೋಗದಿಂದ ಕಳೆದ ಸಾಲಿನಲ್ಲಿ  ತೊಗರಿ ಬೆಳೆ ಹಾನಿಯಿಂದ ನಷ್ಟ ಅನುಭವಿಸಿದ್ದ ರೈತರಿಗೆ  ಬಾಕಿ ಇದ್ದ ಪರಿಹಾರ ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.

ತಮ್ಮ ಮನವಿ ಮೇರೆಗೆ ನೆಟೆ ರೋಗ ಸಂತ್ರಸ್ತರಿಗೆ ಬಾಕಿ ಇದ್ದ 223 ಕೋಟಿ ರೂ ಗಳನ್ನು  ಸರ್ಕಾರ ಮಂಜೂರು ಮಾಡಿ 74 ಕೊಟಿ ರೂಗಳನ್ನು  ಬಿಡುಗಡೆ ಮಾಡಿತ್ತು. ಪ್ರಸ್ತುತ 2ನೇ ಕಂತಿನಲ್ಲಿ 74 ಕೋಟಿ ರೂ ಬಿಡುಗಡೆಗೊಳಿಸಲಾಗಿದೆ. ಬಾಕಿ ಉಳಿದ ರೂ 75 ಕೋಟಿ ಹಣವನ್ನು ಸಹ ಶೀಘ್ರವಾಗಿ ಬಿಡುಗಡೆ ಮಾಡಲಾಗುವುದು ಎಂದು ಕೃಷಿ ಸಚಿವರು ತಿಳಿಸಿದ್ದಾರೆ. 

ಪರಿಹಾರ ಹಣ ಬಿಡುಗಡೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧನ್ಯವಾದ ತಿಳಿಸಿದ್ದು, ನಮ್ಮ ಸರ್ಕಾರ  ರೈತರ  ನೆರವಿಗೆ  ಸದಾ ಇರಲಿದೆ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com