ಉಜ್ಜಯನಿ ಮಹಾಕಾಳೇಶ್ವರ ದೇವಾಲಯದಲ್ಲಿ ಬಿಎಸ್ ಯಡಿಯೂರಪ್ಪ ವಿಶೇಷ ಪೂಜೆ ಸಲ್ಲಿಕೆ!

ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರಿಂದು ಮಧ್ಯಪ್ರದೇಶದ ಉಜ್ಜಯನಿ ಮಹಾಕಾಳೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ವಿಶೇಷ ಪೂಜೆ ಸಲ್ಲಿಸಿದ ಬಿಎಸ್ ಯಡಿಯೂರಪ್ಪ
ವಿಶೇಷ ಪೂಜೆ ಸಲ್ಲಿಸಿದ ಬಿಎಸ್ ಯಡಿಯೂರಪ್ಪ
Updated on

ಉಜ್ಜಯನಿ: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರಿಂದು ಮಧ್ಯಪ್ರದೇಶದ ಉಜ್ಜಯನಿ ಮಹಾಕಾಳೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಪುತ್ರಿ ಬಿವೈ ಅರುಣಾದೇವಿ ಮತ್ತಿತರ ಕುಟುಂಬ ಸದಸ್ಯರೊಂದಿಗೆ ಇಂದು ಬೆಳಗ್ಗೆ ದೇವಾಲಯಕ್ಕೆ ಆಗಮಿಸಿದ ಬಿಎಸ್ ವೈ, ಜ್ಯೋತಿರ್ಲಿಂಗಕ್ಕೆ ವಿಶೇಷ ಪೂಜೆ, ಪುನಸ್ಕಾರ ನೆರವೇರಿಸಿದರು. ಶಾಸಕ ಎಸ್.ಆರ್. ವಿಶ್ವನಾಥ್ ಮತ್ತಿತರರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ,ಜಿ 20 ಶೃಂಗಸಭೆಯನ್ನು ಯಶಸ್ವಿಯಾಗಿ ಆಯೋಜಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಡೀ ಜಗತ್ತು ಮತ್ತು ವಿಶ್ವದಾದ್ಯಂತ ಆಗಮಿಸಿದ ನಾಯಕರು ಶ್ಲಾಘಿಸುತ್ತಿದ್ದಾರೆ. ಇಡೀ ದೇಶದ ಪರವಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com