ವರ್ಗಾವಣೆಯಾದ 6 ತಿಂಗಳ ಬಳಿಕ ಹುದ್ದೆ ನಿಯೋಜಿಸಿದ ಸರ್ಕಾರ: ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಈಗ ಮುಖ್ಯ ಸಂಪಾದಕ!

ಈ ಹಿಂದೆ ವರ್ಗಾವಣೆಯಾಗಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದಾಸರಿ ಅವರಿಗೆ (Rohini Sindhuri) ಕೊನೆಗೂ ರಾಜ್ಯ ಸರ್ಕಾರ ಹುದ್ದೆ ನೀಡಿದ್ದು, ಕರ್ನಾಟಕ ಗೆಜೆಟಿಯರ್ ಇಲಾಖೆಗೆ ಮುಖ್ಯ ಸಂಪಾದಕರ ಹುದ್ದೆಗೆ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಲಾಗಿದೆ.
ರೋಹಿಣಿ ಸಿಂಧೂರಿ
ರೋಹಿಣಿ ಸಿಂಧೂರಿ
Updated on

ಬೆಂಗಳೂರು: ಈ ಹಿಂದೆ ವರ್ಗಾವಣೆಯಾಗಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದಾಸರಿ ಅವರಿಗೆ (Rohini Sindhuri) ಕೊನೆಗೂ ರಾಜ್ಯ ಸರ್ಕಾರ ಹುದ್ದೆ ನೀಡಿದ್ದು, ಕರ್ನಾಟಕ ಗೆಜೆಟಿಯರ್ ಇಲಾಖೆಗೆ ಮುಖ್ಯ ಸಂಪಾದಕರ ಹುದ್ದೆಗೆ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಲಾಗಿದೆ.

ಐಪಿಎಸ್‌ ಅಧಿಕಾರಿ ರೂಪಾ ಮೌದ್ಗಿಲ್‌ ಜತೆಗಿನ ವಿವಾದದ ಆರು ತಿಂಗಳ ಬಳಿಕ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಸರ್ಕಾರ ಹುದ್ದೆ ನಿಯೋಜನೆ ಮಾಡಿದೆ. ಸದ್ಯ ರೋಹಿಣಿ ಸಿಂಧೂರಿ ಅವರು ಕರ್ನಾಟಕ ಗೆಜೆಟಿಯರ್‌ ಡಿಪಾರ್ಟ್‌ಮೆಂಟ್‌ನ ಮುಖ್ಯ ಸಂಪಾದಕರಾಗಿದ್ದಾರೆ. ಬುಧವಾರ ರಾಜ್ಯದ ಹಲವು ಐಎಎಸ್‌ ಅಧಿಕಾರಿಗಳ ವರ್ಗಾವಣೆಯಾಗಿದ್ದು, ಈ ವೇಳೆ ಹಲವು ದಿನಗಳಿಂದ ಹುದ್ದೆಗಾಗಿ ಕಾದು ಕುಳಿತಿದ್ದ ರೋಹಿಣಿ ಸಿಂಧೂರಿ ಅವರಿಗೆ ಹುದ್ದೆ ನಿಯೋಜನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈಗಿನಿಂದ ಮುಂದಿನ ಆದೇಶದವರೆಗೂ ಅವರು ಕರ್ನಾಟಕ ಗೆಜೆಟಿಯರ್‌ ಇಲಾಖೆಯ ಮುಖ್ಯ ಸಂಪಾದಕರು ಹುದ್ದೆ ನಿರ್ವಹಿಸುವಂತೆ ಸೂಚಿಸಲಾಗಿದೆ.

ಕಳೆದ ಕೆಲ ತಿಂಗಳ ಹಿಂದೆ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ನಡುವೆ ಕಿತ್ತಾಟ ನಡೆದಿತ್ತು. ಈ ವೇಳೆ ಇಬ್ಬರಿಗೂ ಸರ್ಕಾರ ಹುದ್ದೆಯನ್ನು ನೀಡದೆ ವರ್ಗಾವಣೆ ಮಾಡಿತ್ತು. ಕಳೆದ 6 ತಿಂಗಳಿನಿಂದ ಸರ್ಕಾರ ರೋಹಿಣಿ ಸಿಂಧೂರಿಗೆ ಯಾವುದೇ ಹುದ್ದೆ ನೀಡಿರಲಿಲ್ಲ.

ಹಲವರ ವರ್ಗ
ಈಗಾಗಲೇ ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿರುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮತ್ತೆ ಕೆಲ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಇದರಲ್ಲಿ ರೋಹಿಣಿ ಸಿಂಧೂರಿಗೂ ಹುದ್ದೆ ನೀಡಿದೆ. ಇದೀಗ ರೋಹಿಣಿ ಸಿಂಧೂರಿಗೆ ಕರ್ನಾಟಕ ಗೆಜೆಟಿಯರ್ ಇಲಾಖೆಗೆ ಮುಖ್ಯ ಸಂಪಾದಕರಾಗಿ ವರ್ಗಾವಣೆ ಮಾಡಿದೆ.

ಯಾರೆಲ್ಲಾ ಐಎಎಸ್‌ ಅಧಿಕಾರಿಗಳು ವರ್ಗಾವಣೆ?

  • ಹುದ್ದೆ ನಿಯೋಜನೆಗೆ ಕಾದಿದ್ದ ಪ್ರದೀಪ್‌ ಜಿ ಎನ್ನುವವರನ್ನು ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆಯ (ಸೋಶಿಯಲ್‌ ಆಡಿಟ್‌) ನಿರ್ದೇಶಕರಾಗಿ ನಿಯೋಜಿಸಲಾಗಿದೆ.
  • ಎಸ್‌ ವಿಕಾಶ್‌ ಕಿಶೋರ್‌ ಅವರನ್ನು ಬಿಬಿಎಂಪಿ ರಾಜರಾಜೇಶ್ವರಿ ನಗರದ ವಲಯ ಆಯ್ತುಕ್ತರಾಗಿ ನಿಯೋಜನೆ ಮಾಡಲಾಗಿದೆ. ಇದಕ್ಕೂ ಮುನ್ನ ಲೋಕಸೇವಾ ಆಯೋಗದ ಕಾರ್ಯದರ್ಶಿಯಾಗಿದ್ದರು.
  • ಹುದ್ದೆ ನಿಯೋಜನೆ ಕಾದಿದ್ದ ಲತಾ ಕುಮಾರಿ ಅವರನ್ನು ಲೋಕಸೇವಾ ಆಯೋಗದ ಕಾರ್ಯದರ್ಶಿಯಾಗಿ
  • ಹುದ್ದೆ ನಿಯೋಜನೆ ಕಾದಿದ್ದ ಸಿಎಸ್‌ ಸುದೀಂದ್ರ ಅವರನ್ನು ಕರಕುಶಲ ಮತ್ತು ಕೈಮಗ್ಗ ಇಲಾಖೆ ನಿರ್ದೇಶಕರ ಹುದ್ದೆಗೆ ನಿಯೋಜನೆ ಮಾಡಲಾಗಿದೆ.
  • ಸಂಗಪ್ಪ ಅವರನ್ನು ಕಿಯೋನಿಸ್ಕ್‌ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.
  • ರೇಷ್ಮೆ ಸಂಶೋಧನಾ ಅಭಿವೃದ್ಧಿ ಮಂಡಳಿಯ ನಿರ್ದೇಶಕರಾಗಿದ್ದ ಶ್ರೀರೂಪಾ ಅವರನ್ನು ಕರ್ನಾಟಕ ರಾಜ್ಯ ಮಿನರಲ್ಸ್‌ ಕಾರ್ಪೋರೇಷನ್‌ ಕಾರ್ಯಕಾರಿ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com