ರಾಜಕಾಲುವೆ ಒತ್ತುವರಿ ಮಾಡಿರುವುದು ನಿಮ್ಮ ಗಮನಕ್ಕೆ ಬಂದಿದೆಯೇ? ಹಾಗಾದರೆ ಫೋಟೋ ಸಮೇತ ಈ ಕಚೇರಿಗಳಿಗೆ ದೂರು ನೀಡಿ...

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾಜಕಾಲುವೆಗಳ ಒತ್ತುವರಿ ಅಥವಾ ಅತಿಕ್ರಮಣ ಗುರುತಿಸಲು ಸಹಾಯ ಮಾಡುವಂತೆ ಸಾರ್ವಜನಿಕರನ್ನು ಮಹಾನಗರ ಪಾಲಿಕೆ ಕೋರಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾಜಕಾಲುವೆಗಳ ಒತ್ತುವರಿ ಅಥವಾ ಅತಿಕ್ರಮಣ ಗುರುತಿಸಲು ಸಹಾಯ ಮಾಡುವಂತೆ ಸಾರ್ವಜನಿಕರನ್ನು ಮಹಾನಗರ ಪಾಲಿಕೆ ಕೋರಿದೆ.

ರಾಜಕಾಲುವೆ ಒತ್ತುವರೆ ಮಾಡಿ ಅಲ್ಲಿ ಕಟ್ಟಡ ನಿರ್ಮಿಸಿರುವುದು ಯಾರಿಗಾದರೂ ತಿಳಿದಿದ್ದರೆ ಅಥವಾ ಗಮನಕ್ಕೆ ಬಂದರೆ ವಲಯಗಳ ಈ ನಿರ್ದಿಷ್ಟ ಕಚೇರಿಗಳ ಅಧಿಕಾರಿಗಳಿಗೆ ದೂರನ್ನು ನೀಡುವಂತೆ ಬಿಬಿಎಂಪಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ. 

ಇತ್ತೀಚೆಗೆ ಹೈಕೋರ್ಟ್, ರಾಜಕಾಲುವೆಯನ್ನು ಅತಿಕ್ರಮಣ ಮಾಡಿರುವ ಬಗ್ಗೆ ಸಮೀಕ್ಷೆ ನಡೆಸಿ ಗುರುತಿಸಿ 10 ದಿನಗಳ ಒಳಗೆ ವರದಿ ನೀಡುವಂತೆ ಬಿಬಿಎಂಪಿಗೆ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಸಾರ್ವಜನಿಕರ ಸಹಕಾರ ಕೋರಿದೆ. 

ಸಾರ್ವಜನಿಕರು ಅತಿಕ್ರಮಣವಾದ ರಾಜಕಾಲುವೆ ಪ್ರದೇಶವನ್ನು ಸ್ಪಷ್ಟವಾಗಿ ಫೋಟೋ ಸಹಿತ ನಿರ್ದಿಷ್ಟ ಅಧಿಕಾರಿಗಳಿಗೆ ಈ ತಿಂಗಳ 20ರೊಳಗೆ ಕಳುಹಿಸುವಂತೆ ಕೋರಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com