ಬೆಂಗಳೂರು: ವಿವಾದಿತ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಈ ಬಾರಿ ಅನುಮತಿ ನಿರಾಕರಿಸಲಾಗಿದೆ.
ಚಾಮರಾಜಪೇಟೆ ಆಟದ ಮೈದಾನ ಕಂದಾಯ ಇಲಾಖೆಗೆ ಒಳಪಟ್ಟಿದ್ದು, ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವಂತೆ ಚಾಮರಾಜಪೇಟೆ ನಾಗರೀಕರ ಒಕ್ಕೂಟ ಮನವಿ ಮಾಡಿತ್ತು. ಆದರೆ, ಈ ಬಾರಿಯೂ ಸರ್ಕಾರ ಅನುಮತಿ ನೀಡಿಲ್ಲ.
ಈ ಹಿನ್ನೆಲೆಯಲ್ಲಿ ಮೈದಾನದ ಪಕ್ಕದ ರಸ್ತೆಯಲ್ಲಿಯೇ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಹಬ್ಬ ಆಚರಿಸಲು ಒಕ್ಕೂಟ ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.
Advertisement