ಮಂಗಳೂರು: ವಾಟ್ಸಾಪ್‌ನಲ್ಲಿ ತ್ರಿವಳಿ ತಲಾಖ್ ನೀಡಿದ ಪತಿ; ದೂರು ದಾಖಲಿಸಿದ ಮಹಿಳೆ

ದಕ್ಷಿಣ ಕನ್ನಡ ಜಿಲ್ಲೆಯ ಮಹಿಳೆಯೊಬ್ಬರು ವಾಟ್ಸಾಪ್ ಮೂಲಕ ತ್ರಿವಳಿ ತಲಾಖ್ ನೀಡಿದ ಪತಿ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಹಿಳೆಯೊಬ್ಬರು ವಾಟ್ಸಾಪ್ ಮೂಲಕ ತ್ರಿವಳಿ ತಲಾಖ್ ನೀಡಿದ ಪತಿ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಮಹಿಳೆಯ ಪತಿ ವಿದೇಶದಲ್ಲಿ ಉದ್ಯೋಗಿಯಾಗಿದ್ದು, ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಆರೋಪಿ ಅಬ್ದುಲ್ ರಶೀದ್ ಕೇರಳದ ತ್ರಿಶೂರ್ ಮೂಲದವರು. ಏಳು ವರ್ಷಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಜಯನಗರ ಮೂಲದ ಮಹಿಳೆಯನ್ನು ಮದುವೆಯಾಗಿದ್ದರು.

ಎರಡು ವರ್ಷಗಳ ಹಿಂದೆ ಅಬ್ದುಲ್ ತನ್ನ ಪತ್ನಿಯನ್ನು ವಿದೇಶಕ್ಕೆ ಕರೆದುಕೊಂಡು ಹೋಗಿದ್ದ. ಆದರೆ, ನಂತರ ಎರಡನೇ ಹೆರಿಗೆ ವೇಳೆ ಆಕೆಯನ್ನು ಸುಳ್ಯದಲ್ಲಿಯೇ ಬಿಟ್ಟು ಹೋಗಿದ್ದ.

ತಡವಾಗಿ ದಂಪತಿ ನಡುವೆ ಭಿನ್ನಾಭಿಪ್ರಾಯ ಉಂಟಾಗಿದ್ದರೂ, ಹಿರಿಯರ ಮಧ್ಯಸ್ಥಿಕೆಯಲ್ಲಿ ಸಮಸ್ಯೆಯನ್ನು ಇತ್ಯರ್ಥಗೊಳಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಆದರೆ, ಇದೀಗ ವ್ಯಕ್ತಿ ವಾಟ್ಸಾಪ್‌ನಲ್ಲಿ ತ್ರಿವಳಿ ತಲಾಖ್ ಮೂಲಕ ವಿಚ್ಛೇದನ ನೀಡಲು ಯತ್ನಿಸಿದ್ದಾನೆ. ಸುಳ್ಯ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com