ಉಡುಪಿ: ಅನ್ಯ ಧರ್ಮಕ್ಕೆ ಸೇರಿದ ಇಬ್ಬರು ವಿದ್ಯಾರ್ಥಿಗಳಿಗೆ ಕಿರುಕುಳ

ಶಿವಮೊಗ್ಗ ಜಿಲ್ಲೆಯ ಆಗುಂಬೆಯ ಜಲಪಾತಕ್ಕೆ ಭೇಟಿ ನೀಡಿ ವಾಪಸ್ಸಾಗುತ್ತಿದ್ದ ಉಡುಪಿ ಜಿಲ್ಲೆ ಕಾಪು ತಾಲೂಕಿನ ಅನ್ಯ ಧರ್ಮಕ್ಕೆ ಸೇರಿದ ಇಬ್ಬರು ಕಾಲೇಜು ವಿದ್ಯಾರ್ಥಿಗಳಿಗೆ ಶುಕ್ರವಾರ ಬಲಪಂಥೀಯ ಕಾರ್ಯಕರ್ತರ ಗುಂಪು ಕಿರುಕುಳ ನೀಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಉಡುಪಿ: ಶಿವಮೊಗ್ಗ ಜಿಲ್ಲೆಯ ಆಗುಂಬೆಯ ಜಲಪಾತಕ್ಕೆ ಭೇಟಿ ನೀಡಿ ವಾಪಸ್ಸಾಗುತ್ತಿದ್ದ ಉಡುಪಿ ಜಿಲ್ಲೆ ಕಾಪು ತಾಲೂಕಿನ ಅನ್ಯ ಧರ್ಮಕ್ಕೆ ಸೇರಿದ ಇಬ್ಬರು ಕಾಲೇಜು ವಿದ್ಯಾರ್ಥಿಗಳಿಗೆ ಶುಕ್ರವಾರ ಬಲಪಂಥೀಯ ಕಾರ್ಯಕರ್ತರ ಗುಂಪು ಕಿರುಕುಳ ನೀಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ವಿದ್ಯಾರ್ಥಿನಿಯ ಸಹೋದರ ನೀಡಿದ ದೂರಿನ ಮೇರೆಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನನ್ನ ಸಹೋದರಿ  ಅನ್ಯ ಸಮುದಾಯಕ್ಕೆ ಸೇರಿದ ಕಾಲೇಜು ಸಹಪಾಠಿ ಜೊತೆಗೆ ಮೋಟಾರ್ ಸೈಕಲ್ ನಲ್ಲಿ ಆಗುಂಬೆಗೆ ಹೋಗಿದ್ದರು. ಅವರು ಹಿಂತಿರುಗುತ್ತಿದ್ದಾಗ ಬಲಪಂಥೀಯ ಕಾರ್ಯಕರ್ತರ ಗುಂಪು ಮೋಟಾರ್ ಸೈಕಲ್ ಅಡ್ಡಗಟ್ಟಿದ್ದಾರೆ ದೂರಿನಲ್ಲಿ ತಿಳಿಸಿದ್ದಾರೆ.ಬೇರೆ ಸಮುದಾಯದ ವ್ಯಕ್ತಿಯೊಂದಿಗೆ ಹೊರಗೆ ಹೋಗಿದ್ದಕ್ಕಾಗಿ ಅವರು ತನ್ನ ಸಹೋದರಿ ಮೇಲೆ ದೌರ್ಜನ್ಯವೆಸಗಿದ್ದು, ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ನೈತಿಕ ಪೊಲೀಸ್ ಗಿರಿಯ ಕಿರುಕುಳವನ್ನು ಹುಡುಗಿಯ ಕಾಲೇಜು ಮೇಟ್ ತನ್ನ ಮೊಬೈಲ್ ಫೋನ್‌ನಲ್ಲಿ ರೆಕಾರ್ಡ್ ಮಾಡಿದ್ದಾನೆ. ದೂರಿನ ಆಧಾರದ ಮೇಲೆ, ಕಾಪು ಪೊಲೀಸರು ಸೆಕ್ಷನ್ 143 (ಕಾನೂನುಬಾಹಿರ ಸಭೆ) 147 (ಗಲಭೆ) 341 (ತಪ್ಪು ಸಂಯಮ), 505 (2) (ವರ್ಗಗಳ ನಡುವೆ ದ್ವೇಷ, ದ್ವೇಷವನ್ನು ಸೃಷ್ಟಿಸುವ ಅಥವಾ ಉತ್ತೇಜಿಸುವ ಹೇಳಿಕೆಗಳು) 354 ಡಿ (ಹಿಂಬಾಲಿಸುವುದು) ಅಡಿಯಲ್ಲಿ ಶಿಕ್ಷಾರ್ಹ ಅಪರಾಧಗಳಿಗಾಗಿ ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com