ಮುಂಗಾರು ವೈಫಲ್ಯ-ಬರ: ನೆರೆಯ ರಾಜ್ಯಗಳಿಗೆ ಮೇವು ಮಾರಾಟ ಮತ್ತು ಸಾಗಣೆಗೆ ಸರ್ಕಾರ ನಿಷೇಧ

ಈ ಬಾರಿ ಆಗಸ್ಟ್-ಸೆಪ್ಟೆಂಬರ್ ತಿಂಗಳಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಬಿತ್ತನೆ ಚಟುವಟಿಕೆಗಳು ಕುಂಠಿತವಾಗಿರುವುದರಿಂದ ನೆರೆಯ ರಾಜ್ಯಗಳಿಗೆ ಮೇವು ಮಾರಾಟ ಮತ್ತು ಸಾಗಣೆಯನ್ನು ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮೈಸೂರು: ಈ ಬಾರಿ ಆಗಸ್ಟ್-ಸೆಪ್ಟೆಂಬರ್ ತಿಂಗಳಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಬಿತ್ತನೆ ಚಟುವಟಿಕೆಗಳು ಕುಂಠಿತವಾಗಿರುವುದರಿಂದ ನೆರೆಯ ರಾಜ್ಯಗಳಿಗೆ ಮೇವು ಮಾರಾಟ ಮತ್ತು ಸಾಗಣೆಯನ್ನು ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ. 

ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್, ಕಾವೇರಿ ಜಲಾನಯನ ಪ್ರದೇಶದ ಮೈಸೂರು, ಚಾಮರಾಜನಗರ, ಕೊಡಗು ಸೇರಿದಂತೆ ಇತರೆ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಮೇವು ಬೇರೆ ರಾಜ್ಯಗಳಿಗೆ ಮಾರಾಟ ಮತ್ತು ಸಾಗಾಣಿಕೆ ಮಾಡದಂತೆ ಸೂಚಿಸಲಾಗಿದೆ. ಜಾನುವಾರುಗಳಿಗೆ ಮೇವು ಬೆಳೆಯಲು ರೈತರಿಗೆ ಉಚಿತವಾಗಿ ಬೀಜಗಳನ್ನು ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಹೇಳಿದರು.

ಕಾಲುಬಾಯಿ ಜ್ವರದಿಂದ ಜಾನುವಾರುಗಳನ್ನು ಕಳೆದುಕೊಂಡ ರೈತರಿಗೆ ಪರಿಹಾರ ನೀಡುವ ಕುರಿತು ಸಚಿವರು, ಹಿಂದಿನ ಬಿಜೆಪಿ ಸರ್ಕಾರ ಪರಿಹಾರ ನೀಡುವುದನ್ನು ನಿಲ್ಲಿಸಿತ್ತು, ಕಾಂಗ್ರೆಸ್ ಸರ್ಕಾರವು ಪ್ರತಿ ಜಾನುವಾರು ಸಾವಿಗೆ 10 ಸಾವಿರ ರೂಪಾಯಿ, ಕುರಿ ಮತ್ತು ಆಡುಗಳು ಸತ್ತರೆ 5 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು. ಕಳೆದ ವರ್ಷ ಜಾನುವಾರುಗಳನ್ನು ಕಳೆದುಕೊಂಡ ರೈತರಿಗೆ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದು, ಇದಕ್ಕಾಗಿ 20 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗುವುದು ಎಂದರು. 

ಪಶು ಸಹಾಯಕ: ಕೇಂದ್ರ ಸರಕಾರ ಪಶು ಶಾಯಕ ಯೋಜನೆಗೆ ಅನುದಾನ ನೀಡಿದ್ದು, ಜಾನುವಾರು ನಿರ್ವಹಣೆಯಲ್ಲಿ ತರಬೇತಿ ಪಡೆದು ದನ ಮಾಲೀಕರು ಮತ್ತು ಪಶುವೈದ್ಯರ ನಡುವೆ ಸೇತುವೆಯಾಗಿ ಕೆಲಸ ಮಾಡುವ ಪ್ರತಿ ಮಹಿಳಾ ಪಶು ಸಹಾಯಕರಿಗೆ ತಿಂಗಳಿಗೆ 3,900 ರೂಪಾಯಿ ನೀಡಲಾಗುವುದು. ವರುಣಾ ಕ್ಷೇತ್ರದ ಉತ್ತನಹಳ್ಳಿಯಲ್ಲಿ ಸೆಪ್ಟೆಂಬರ್ 26ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು.

ಜಾನುವಾರುಗಳ ಕಾಲು ಮತ್ತು ಬಾಯಿ ರೋಗವನ್ನು ತಡೆಗಟ್ಟಲು ಸರ್ಕಾರ ಕ್ರಮ ಕೈಗೊಳ್ಳುತ್ತಿದ್ದು, ನಾಲ್ಕನೇ ಸುತ್ತಿನ ಲಸಿಕೆಯನ್ನು ಸಹ ಪ್ರಾರಂಭಿಸುತ್ತದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com