ನಾಳೆ ಬಂದ್ ಹಿನ್ನೆಲೆ ಕರ್ನಾಟಕ ರಾಜ್ಯ ಮುಕ್ತ ವಿವಿ ಪದವಿ, ಸ್ನಾತಕೋತ್ತರ ಪರೀಕ್ಷೆ ಮುಂದೂಡಿಕೆ; ಕಾನೂನು ವಿವಿ ಪರೀಕ್ಷೆಗಳೂ ಮುಂದಕ್ಕೆ

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ ಭುಗಿಲೆದ್ದಿದ್ದು, ನಾಳೆ ಬೆಂಗಳೂರು ಬಂದ್ ಗೆ ಕರೆ ನೀಡಲಾಗಿರುವ ಹಿನ್ನೆಲೆಯಲ್ಲಿ ಪ್ರಮುಖ ವಿವಿಗಳು ಪರೀಕ್ಷೆಗಳನ್ನು ಮುಂದೂಡಿವೆ.
ಪರೀಕ್ಷೆ (ಸಂಗ್ರಹ ಚಿತ್ರ)
ಪರೀಕ್ಷೆ (ಸಂಗ್ರಹ ಚಿತ್ರ)

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ ಭುಗಿಲೆದ್ದಿದ್ದು, ನಾಳೆ ಬೆಂಗಳೂರು ಬಂದ್ ಗೆ ಕರೆ ನೀಡಲಾಗಿರುವ ಹಿನ್ನೆಲೆಯಲ್ಲಿ ಪ್ರಮುಖ ವಿವಿಗಳು ಪರೀಕ್ಷೆಗಳನ್ನು ಮುಂದೂಡಿವೆ.

ಸೆ.26, 28, 29 ರಂದು ನಡೆಯಬೇಕಿದ್ದ  ಪದವಿ, ಸ್ನಾತಕೋತ್ತರ ಪರೀಕ್ಷೆಗಳನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಮುಂದೂಡಿದೆ. ಕುಲಸಚಿವ ಕೆಬಿ ಪ್ರವೀಣ್ ಪರೀಕ್ಷೆಗಳನ್ನು ಮುಂದೂಡಿರುವ ಬಗ್ಗೆ ಆದೇಶ ಹೊರಡಿಸಿದ್ದಾರೆ. 

ಸೆ.26, 28, 29 ರಂದು ಸೈಕಾಲಜಿ, ಹಿಂದಿ, ಎಂಎ ಪತ್ರಿಕೋದ್ಯಮ, ರಾಜಕೀಯ ಶಾಸ್ತ್ರ, ವಾಣಿಜ್ಯ ಶಾಸ್ತ್ರ ಪರೀಕ್ಷೆಗಳು ನಡೆಯಬೇಕಿತ್ತು.

ಬೆಂಗಳೂರು ಬಂದ್ ಹಿನ್ನೆಲೆ ನಾಳೆ ನಡೆಯಬೇಕಿದ್ದ ಕಾನೂನು ವಿಶ್ವವಿದ್ಯಾನಿಲಯದ ಪರೀಕ್ಷೆಗಳು ಕೂಡ ಮುಂದೂಡಿಕೆಯಾಗಿವೆ. ನಾಳಿನ ಎಲ್ಲಾ ಪರೀಕ್ಷೆಗಳನ್ನು ಅಕ್ಟೋಬರ್ 8ಕ್ಕೆ ಮುಂದೂಡಿಕೆ ಮಾಡಿ ವಿವಿ ಮೌಲ್ಯಮಾಪನ ಕುಲಸಚಿವರು ಆದೇಶ ಹೊರಡಿಸಿದ್ದಾರೆ. ಉಳಿದ ಪರೀಕ್ಷೆಗಳು ಯಥಾ ರೀತಿ ನಡೆಯಲಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com