BMTC ಸಿಬ್ಬಂದಿಗೆ 1 ಕೋಟಿ ರೂ. ಅಪಘಾತ ವಿಮೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ನೌಕರರು 1 ಕೋಟಿ ರೂ.ವರೆಗಿನ ಅಪಘಾತ ವಿಮೆಗೆ ಅರ್ಹರಾಗಿರುತ್ತಾರೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
ಅಪಘಾತ ವಿಮೆ (ಸಂಗ್ರಹ ಚಿತ್ರ)
ಅಪಘಾತ ವಿಮೆ (ಸಂಗ್ರಹ ಚಿತ್ರ)
Updated on

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ನೌಕರರು 1 ಕೋಟಿ ರೂ.ವರೆಗಿನ ಅಪಘಾತ ವಿಮೆಗೆ ಅರ್ಹರಾಗಿರುತ್ತಾರೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ಸೋಮವಾರ ಬೆಂಗಳೂರಿನಲ್ಲಿ ನಡೆದ ಬಿಎಂಟಿಸಿ ರಜತ ಮಹೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 'ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ನೌಕರರಿಗೆ ಲಭ್ಯವಿರುವ ಒಂದು ಕೋಟಿ ಅಪಘಾತ ವಿಮೆಯನ್ನು ಈಗ ಬಿಎಂಟಿಸಿ ನೌಕರರಿಗೂ ವಿಸ್ತರಿಸಲಾಗುವುದು. ಬಿಎಂಟಿಸಿ ಉದ್ಯೋಗಿಯೊಬ್ಬರು ಸಾವನ್ನಪ್ಪಿದರೆ, ಅವರ ಕುಟುಂಬಕ್ಕೆ 1 ಕೋಟಿ ರೂಪಾಯಿ ಅಪಘಾತ ವಿಮಾ ಮೊತ್ತವನ್ನು ಪಡೆಯಲು ಅರ್ಹರಾಗಿರುತ್ತಾರೆ ಎಂದು ರಾಮಲಿಂಗಾ ರೆಡ್ಡಿ ಹೇಳಿದರು.

ಇದೇ ವೇಳೆ ಅನುಕಂಪದ ಆಧಾರದ ಮೇಲೆ ಅಪಘಾತದಿಂದ ಸಾವನ್ನಪ್ಪುವ ನೌಕರರ ಕುಟುಂಬ ಸದಸ್ಯರಿಗೆ ಉದ್ಯೋಗ ನೀಡಲಾಗುವುದು. 'ಕೆಲವು ತಾಂತ್ರಿಕ ಕಾರಣಗಳಿಂದ 8 ವರ್ಷಗಳಿಂದ ಉದ್ಯೋಗಗಳನ್ನು ಒದಗಿಸಲಾಗಿಲ್ಲ. ಕೂಡಲೇ ಹಂತಹಂತವಾಗಿ ಕುಟುಂಬ ಸದಸ್ಯರಿಗೆ ನೇಮಕಾತಿ ಆದೇಶ ನೀಡುವಂತೆ ವ್ಯವಸ್ಥಾಪಕ ನಿರ್ದೇಶಕಿ ಸತ್ಯವತಿ ಅವರಿಗೆ ಆದೇಶ ನೀಡಿದ್ದೇನೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com