social_icon

2018ರಲ್ಲಿ ಮಾಡಿದ ತಪ್ಪನ್ನು ಮತ್ತೆ ಮಾಡದಿರಿ, ಡಬಲ್ ಇಂಜಿನ್ ಬಿಜೆಪಿ ಸರ್ಕಾರಕ್ಕೆ ಬಹುಮತ ನೀಡಿ: ಮತದಾರರಿಗೆ ಪಿಯೂಷ್ ಗೋಯಲ್ ಮನವಿ

2018ರ ಚುನಾವಣೆಯಲ್ಲಿ ಮಾಡಿದ್ದ ತಪ್ಪನ್ನು ಪುನರಾವರ್ತಿಸದಿರಿ. ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಡಬಲ್ ಇಂಜಿನ್ ಬಿಜೆಪಿ ಸರ್ಕಾರಕ್ಕೆ ಸಂಪೂರ್ಣ ಬಹುಮತ ನೀಡಿ ಎಂದು ಮತದಾರರಿಗೆ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರು ಶುಕ್ರವಾರ ಮನವಿ ಮಾಡಿಕೊಂಡಿದ್ದಾರೆ.

Published: 08th April 2023 09:11 AM  |   Last Updated: 08th April 2023 04:33 PM   |  A+A-


Piyush Goyal

ಪಿಯೂಷ್ ಗೋಯಲ್

Posted By : Manjula VN
Source : The New Indian Express

ಬೆಂಗಳೂರು: 2018ರ ಚುನಾವಣೆಯಲ್ಲಿ ಮಾಡಿದ್ದ ತಪ್ಪನ್ನು ಪುನರಾವರ್ತಿಸದಿರಿ. ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಡಬಲ್ ಇಂಜಿನ್ ಬಿಜೆಪಿ ಸರ್ಕಾರಕ್ಕೆ ಸಂಪೂರ್ಣ ಬಹುಮತ ನೀಡಿ ಎಂದು ಮತದಾರರಿಗೆ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರು ಶುಕ್ರವಾರ ಮನವಿ ಮಾಡಿಕೊಂಡಿದ್ದಾರೆ.

ಫೆಡರೇಶನ್ ಆಫ್ ಕರ್ನಾಟಕ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ (ಎಫ್‌ಕೆಸಿಸಿಐ) ಯೊಂದಿಗಿನ ಸಂವಾದದಲ್ಲಿ ಮಾತನಾಡಿರುವ ಅವರು, ಕರ್ನಾಟಕ ಜನರ ಕಲ್ಯಾಣಕ್ಕೆ ಬದ್ಧವಾಗಿರುವ ಮತ್ತು ಉತ್ತಮ ಆಡಳಿತವನ್ನು ನೀಡುವ ಬಲಿಷ್ಠ ಮತ್ತು ಏಕಪಕ್ಷೀಯ ಸರ್ಕಾರವನ್ನು ಆಯ್ಕೆ ಮಾಡುವಂತೆ ಜನತೆಗೆ ಮನವಿ ಮಾಡಿಕೊಂಡರು.

2018ರ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಬಹುಮತ ಸಿಕ್ಕಿರಲಿಲ್ಲ. ನಂದರ ಸಮ್ಮಿಶ್ರ ಸರ್ಕಾರ ರಚಿಸಲು ಕಾಂಗ್ರೆಸ್ ಮತ್ತು ಜೆಡಿಎಸ್ ಕೈಜೋಡಿಸಿದ್ದವು. ನಂತರ ಕಾಂಗ್ರೆಸ್, ಜೆಡಿಎಸ್ ನಾಯಕರು ಬಿಜೆಪಿಗೆ ಪಕ್ಷಾಂತರಗೊಂಡು ಬಿಜೆಪಿ ಸರ್ಕಾರ ರಚನೆ ಮಾಡಿತ್ತು. ಈ ಮೂಲಕ ಏಕೈಕ ದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿತು.

ಇದನ್ನೂ ಓದಿ: ಸಮಾಜದ ಕಟ್ಟಕಡೆಯ ಸಮುದಾಯಕ್ಕೆ ಘನತೆ ತಂದುಕೊಟ್ಟ ಏಕೈಕ ಪ್ರಧಾನಿ ಮೋದಿ: ಪಿಯೂಷ್ ಗೋಯಲ್

ಕರ್ನಾಟಕದಲ್ಲಿ ಬಿಜೆಪಿಯ ಸಂಪೂರ್ಣ ಬಹುಮತದ ಸರ್ಕಾರ ಬರಬೇಕೆಂದು ನಾವು ಬಯಸುತ್ತಿದ್ದೇವೆ. ಕಳೆದ ಬಾರಿ ನೀವು ಮಾಡಿದ ತಪ್ಪನ್ನು ಪುನರಾವರ್ತಿಸದಿರಿ. ನಮ್ಮನ್ನು ಬಿಟ್ಟು ಎಲ್ಲೋ ಹೋಗಬೇಡಿ ಇದರಿಂದ ಇತರರು ಕರ್ನಾಟಕದ ಜನರ ಜನಾದೇಶಕ್ಕೆ ಮೋಸ ಮಾಡಬಹುದು. ಪ್ರಧಾನಿ ಮೋದಿಯವರ ಮಾರ್ಗದರ್ಶನ ಮತ್ತು ನಾಯಕತ್ವದಲ್ಲಿ ಸಂಪೂರ್ಣ ಬಹುಮತದೊಂದಿಗೆ ಉತ್ತಮವಾದ ಪ್ರಬಲ ಏಕಪಕ್ಷೀಯ ಸರ್ಕಾರವು ಕರ್ನಾಟಕವನ್ನು ಪರಿವರ್ತಿಸುತ್ತದೆ, ಪ್ರಕ್ರಿಯೆಯನ್ನು ಸುಧಾರಿಸುತ್ತದೆ, ತಂತ್ರಜ್ಞಾನವನ್ನು ಆಡಳಿತಕ್ಕೆ ತರುತ್ತದೆ ಮತ್ತು ಕರ್ನಾಟಕದ ಅಭಿವೃದ್ಧಿಯನ್ನು ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ ವೇಗಗೊಳಿಸುತ್ತದೆ ಎಂದು ಹೇಳಿದರು.

ಬಳಿಕ ಕೇಂದ್ರದಲ್ಲಿ ಮೋದಿ ನೇತೃತ್ವದ ಸರ್ಕಾರದ ವಿವಿಧ ಉಪಕ್ರಮಗಳು ಮತ್ತು ಕಾರ್ಯಕ್ರಮಗಳನ್ನು ಪಟ್ಟಿ ಮಾಡಿದರು.

ಕಳೆದ ಒಂಬತ್ತು ವರ್ಷಗಳಲ್ಲಿ ಮೋದಿ ಸರ್ಕಾರವು ಬಲವಾದ ಸ್ಥೂಲ ಆರ್ಥಿಕ ಮೂಲಭೂತ ಅಡಿಪಾಯವನ್ನು ರಚಿಸಿದೆ, ಅದರ ಮೇಲೆ ದೇಶವು ಭವಿಷ್ಯದಲ್ಲಿ ದಶಕಗಳವರೆಗೆ ಬೆಳೆಯಬಹುದಾಗಿದೆ. "ಇಂದು ನಾವು ವಿಶ್ವದ ಅತ್ಯಂತ ಕಡಿಮೆ ಹಣದುಬ್ಬರವನ್ನು ಹೊಂದಿದ್ದೇವೆ, ಕರೆನ್ಸಿಗಳಿಗೆ ಹೋಲಿಸಿದರೆ ನಮ್ಮ ಕರೆನ್ಸಿ ಬಲಗೊಂಡಿದೆ. ಇತರ ಕರೆನ್ಸಿಗಳು ಅಮೆರಿಕಾ ಡಾಲರ್‌ಗಿಂತ ಹೆಚ್ಚು ಕುಸಿತ ಕಂಡಿವೆ. ರಷ್ಯಾ-ಉಕ್ರೇನ್ ಯುದ್ಧದಂತಹ ಜಾಗತಿಕ ಬಿಕ್ಕಟ್ಟುಗಳ ಹೊರತಾಗಿಯೂ, ಭಾರತದ ಹಣದುಬ್ಬರವು 6-6 ರಷ್ಟಿತ್ತು ಎಂದು ತಿಳಿಸಿದರು.


Stay up to date on all the latest ರಾಜ್ಯ news
Poll
N R narayana Murty

ಯಾವುದನ್ನೂ ಫ್ರೀಯಾಗಿ ಕೊಡಬಾರದು ಎಂದು ಎನ್ ಆರ್ ನಾರಾಯಣ ಮೂರ್ತಿ ಹೇಳಿದ್ದಾರೆ.


Result
ಸರಿ
ತಪ್ಪು

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp