ಕೋವಿಡ್ ಪ್ರಕರಣ ಹೆಚ್ಚಳ: ಆತಂಕ ಬೇಡ, ಮುನ್ನೆಚ್ಚರಿಕೆ ವಹಿಸಿ; ವೈದ್ಯರ ಸಲಹೆ

ನೆರೆಯ ರಾಜ್ಯ ಕೇರಳದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 11,000 ಗಡಿ ದಾಟಿದ್ದು, ಈ ಬೆಳವಣಿಗೆ ರಾಜ್ಯದಲ್ಲೂ ಸೋಂಕು ಹೆಚ್ಚಳವಾಗುವ ಕುರಿತು ಆತಂಕ ಹುಟ್ಟಿಸಿದೆ. ಈ ಹಿನ್ನೆಲೆಯಲ್ಲಿ ಆತಂಕ ಬೇಡ, ಮುನ್ನೆಚ್ಚರಿಕೆ ವಹಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ನೆರೆಯ ರಾಜ್ಯ ಕೇರಳದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 11,000 ಗಡಿ ದಾಟಿದ್ದು, ಈ ಬೆಳವಣಿಗೆ ರಾಜ್ಯದಲ್ಲೂ ಸೋಂಕು ಹೆಚ್ಚಳವಾಗುವ ಕುರಿತು ಆತಂಕ ಹುಟ್ಟಿಸಿದೆ. ಈ ಹಿನ್ನೆಲೆಯಲ್ಲಿ ಆತಂಕ ಬೇಡ, ಮುನ್ನೆಚ್ಚರಿಕೆ ವಹಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ರಾಜ್ಯದಲ್ಲಿ ಸಕ್ರಿಯ ಪ್ರಕರಣ ಸ್ವಲ್ಪ ಹೆಚ್ಚಾಗಿದೆ. ಆದರೆ, ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆಯಲ್ಲಿ ಹೆಚ್ಚಳಗಳಿಲ್ಲ ಹೀಗಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ರೋಗ ಲಕ್ಷಣ ಇರುವವರಿಗೆ ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದ್ದು, ಪ್ರತಿನಿತ್ಯ ಸರಾಸರಿ 9,000 ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

ತಾಂತ್ರಿಕ ಸಲಹಾ ಸಮಿತಿಯ ಅಧ್ಯಕ್ಷ ಡಾ.ಎಂ.ಕೆ.ಸುದರ್ಶನ್ ಮಾತನಾಡಿ, ಜನರು ಕೋವಿಡ್ ಸೂಕ್ತ ನಡವಳಿಕೆಯನ್ನು ಅನುಸರಿಸದಿರುವುದು ಪ್ರಕರಣಗಳ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ. ಆದರೆ, ಈ ಪ್ರವೃತ್ತಿಯು ಹೆಚ್ಚು ಕಾಲ ಮುಂದುವರಿಯುವುದಿಲ್ಲ ಎಂದು ಹೇಳಿದ್ದಾರೆ.

ILI ಮತ್ತು SARI, ಅಡೆನೊವೈರಸ್, H3N2 ಮತ್ತು H1N1 ಪ್ರಕರಣಗಳಿಂದ ಎದುರಾಗುತ್ತಿರುವ ಸಾವುಗಳು ಕೆಲವೇ ದಿನಗಳ ಕಾಲವಷ್ಟೇ ಇರಲಿದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com