ಬೆಂಗಳೂರು: ಕೋರ್ಟ್ ಕಾಂಪ್ಲೆಕ್ಸ್ ಒಳಗೆ ಮಹಿಳೆಯಿಂದ ವಕೀಲರ ಮೇಲೆ ಚಾಕುವಿನಿಂದ ಹಲ್ಲೆ

ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ಎಸಿಎಂಎಂ) ನ್ಯಾಯಾಲಯದ ಸಂಕೀರ್ಣದಲ್ಲಿ ಶುಕ್ರವಾರ ಹಿರಿಯ ವಕೀಲರೊಬ್ಬರ ಮೇಲೆ ಮಹಿಳೆಯೊಬ್ಬರು ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ಎಸಿಎಂಎಂ) ನ್ಯಾಯಾಲಯದ ಸಂಕೀರ್ಣದಲ್ಲಿ ಶುಕ್ರವಾರ ಹಿರಿಯ ವಕೀಲರೊಬ್ಬರ ಮೇಲೆ ಮಹಿಳೆಯೊಬ್ಬರು ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ವಕೀಲ ಕೃಷ್ಣಾ ರೆಡ್ಡಿ, ಸಮೀಪದ ಆಸ್ಪತ್ರೆಯಿಂದ ಚಿಕಿತ್ಸೆ ಪಡೆದಿದ್ದು, ನಂತರ ಹಲಸೂರು ಗೇಟ್ ಪೊಲೀಸರಿಗೆ ದೂರು ನೀಡಿದ್ದು, ಆಕೆಯ ವಿರುದ್ಧ ಕೊಲೆ ಪ್ರಕರಣ ದಾಖಲಿಸುವಂತೆ ಕೋರಿದ್ದಾರೆ.

ಶಂಕಿತ ಮಹಿಳೆ ಕಾಂಚನಾ, ರೆಡ್ಡಿಯ ಮುಖದ ಎಡಭಾಗದ ಮೇಲೆ ದಾಳಿ ಮಾಡಿದ್ದು, ನಂತರ ಸ್ಥಳದಿಂದ ಆಕೆ ಪರಾರಿಯಾಗಿದ್ದಾಳೆ. ರಕ್ತಸ್ರಾವವಾಗುತ್ತಿದ್ದ ವಕೀಲರ ವಿಡಿಯೋ ವೈರಲ್ ಆಗಿದೆ. 

ಚೆಕ್ ಬೌನ್ಸ್ ಪ್ರಕರಣದಲ್ಲಿ ಹಲ್ಲೆಗೊಳಗಾದ ವಕೀಲರು ತನ್ನ ಕಕ್ಷಿದಾರ ಹರೀಶ್ ಪರ ಹಾಜರಾಗಿದ್ದರು. ಮೂರು ವರ್ಷಗಳ ಹಿಂದೆ ಹರೀಶ್‌ ಎಂಬುವವರಿಂದ ಐದು ಲಕ್ಷ ರೂಪಾಯಿ ಸಾಲ ಪಡೆದಿದ್ದ ಕಾಂಚನಾ, ಚೆಕ್ ನೀಡಿದ್ದು, ಅದು ಬೌನ್ಸ್ ಆಗಿದೆ. ನ್ಯಾಯಾಲಯಕ್ಕೆ ಹಾಜರಾದ ನಂತರ, ನ್ಯಾಯಾಲಯದ ಹೊರಗೆ ಇತ್ಯರ್ಥಕ್ಕೆ ಆಯ್ಕೆ ಮಾಡಿಕೊಳ್ಳುವ ಬದಲು ಪ್ರಕರಣದ ವಿರುದ್ಧ ಹೋರಾಡುವ  ವಕೀಲರ ನಿರ್ಧಾರವನ್ನು ವಿರೋಧಿಸಿ  ಆಕೆ ಕಾಯುತ್ತಿದ್ದಳು ಎಂದು ಹೇಳಲಾಗುತ್ತಿದೆ ಮತ್ತು ವಾದವಿವಾದದ ಸಮಯದಲ್ಲಿ ಅವಳು ಇದ್ದಕ್ಕಿದ್ದಂತೆ ಚಾಕು ಹೊರತೆಗೆದು ವಕೀಲರ ಹಲ್ಲೆ ನಡೆಸಿದ್ದಾಳೆ. 

ಸ್ಥಳ ಮಹಜರಿಗೆ ಅನುಮತಿ ನೀಡುವಂತೆ ನ್ಯಾಯಾಂಗ ಅಧಿಕಾರಿಗಳಿಗೆ ಮನವಿ ಮಾಡಿದ್ದೇವೆ. ಇತರ ಅಪರಾಧ ದೃಶ್ಯಗಳಿಗಿಂತ ನ್ಯಾಯಾಲಯದ ಆವರಣದಲ್ಲಿ ನಡೆಯುವ ಪ್ರಕರಣಗಳ ತನಿಖೆಗೆ ವಿಭಿನ್ನವಾಗಿದೆ.  ನ್ಯಾಯಾಲಯದ ಆವರಣದಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಬೇಕು ಎಂದು ತನಿಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಹೆಚ್ಚಿನ ತನಿಖೆಗಳು ನಡೆಯುತ್ತಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com